<p><strong>ಬೆಂಗಳೂರು:</strong> ಎಸ್ಸೆಸ್ಸೆಲ್ಸಿ ಸಮಾಜವಿಜ್ಞಾನ ಪರೀಕ್ಷೆ ಬುಧವಾರ ನಡೆದಿದ್ದು, 7,84,287 ವಿದ್ಯಾರ್ಥಿಗಳ ಪೈಕಿ 7,68,341 ಮಂದಿ ಪರೀಕ್ಷೆ ಬರೆಯುವ ಮೂಲಕ ಶೇ 97.96ರಷ್ಟು ಹಾಜರಾತಿ ದಾಖಲಾಗಿದೆ.</p>.<p>‘ಕಳೆದ ವರ್ಷ ಶೇ 98.78 ಹಾಜರಾತಿ ಇತ್ತು. ಕಂಟೈನ್ಮೆಂಟ್ ಪ್ರದೇಶಗಳ 3,363 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡೇತರ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 613 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಅಕ್ರಮಗ<br />ಳಲ್ಲಿ ಭಾಗಿಯಾದ ಯಾವುದೇ ಪ್ರಕರಣಗಳು ನಡೆದಿಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕೋವಿಡ್ ಕಾರಣಕ್ಕೆ ಇದುವರೆಗೆ 32 ಮಂದಿ ಪರೀಕ್ಷೆ ಬರೆದಿಲ್ಲ. ನೆರೆ ರಾಜ್ಯಗಳಿಂದ 645 ವಿದ್ಯಾರ್ಥಿಗಳ ಪೈಕಿ 593 ಮಂದಿ ಪರೀಕ್ಷೆ ಬರೆದಿದ್ದಾರೆ. 12,644 ವಲಸೆ ವಿದ್ಯಾರ್ಥಿಗಳ ಪೈಕಿ 12,541 ಮಂದಿ ಹಾಜರಾಗಿದ್ದಾರೆ’ ಎಂದು ಸಚಿವರು ತಿಳಿಸಿದರು.</p>.<p>‘ಕೋರ್ ವಿಷಯಗಳ ಪರೀಕ್ಷೆ ಕೊನೆಗೊಂಡಿದೆ. ಗುರುವಾರ ಮತ್ತು ಶುಕ್ರವಾರ ಪ್ರಥಮ ಭಾಷೆ, ತೃತೀಯ ಭಾಷೆ ಪರೀಕ್ಷೆಗಳಿವೆ. ಇವುಗಳ ಯಶಸ್ಸಿಗೂ ಇದೇ ರೀತಿಯ ಬದ್ಧತೆ ಇರಲಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ವ್ಯವಸ್ಥೆ ಮೇಲೆ<br />ವಿಶ್ವಾಸವಿಟ್ಟುಕೊಳ್ಳಬೇಕು’ ಎಂದು ಸಚಿವರು ಮನವಿ ಮಾಡಿದರು.</p>.<p><strong>‘ಫೂಟೇಜ್’ ಪರಿಶೀಲನೆ ಕಡ್ಡಾಯ</strong><br />‘ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರತಿದಿನದ ಪರೀಕ್ಷೆ ಮುಗಿದ ಬಳಿಕ ಸಿಸಿಟಿವಿ ಫೂಟೇಜ್ಗಳನ್ನು ಹಿರಿಯ ಅಧಿಕಾರಿಗಳಿಗೆ ಕಡ್ಡಾಯವಾಗಿ ಸಲ್ಲಿಸಬೇಕು’ ಎಂದು ಸಚಿವ ಸುರೇಶ್ ಕುಮಾರ್ ಎಚ್ಚರಿಸಿದ್ದಾರೆ.</p>.<p>ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಬಂದ್ ಮಾಡಿ ನಕಲು ಮಾಡಿರುವ ಪ್ರಕರಣದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.</p>.<p>‘ಪ್ರಾಥಮಿಕ ವರದಿಯಂತೆ ಅಕ್ರಮ ನಡೆದಿರುವುದು ಗೊತ್ತಾಗಿಲ್ಲ, ಆದರೆ, ಫೂಟೇಜ್ ಅನ್ನು ಮತ್ತೊಮ್ಮೆ ಪರಿಶೀಲಿಸಲಾಗುವುದು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್ ತಿಳಿಸಿದರು.</p>.<p><strong>ಕಾಡಿದಅಪೆಂಡಿಸೈಟಿಸ್ </strong></p>.<p>* ಬೆಂಗಳೂರಿನ ನಿರ್ಮಲಾ ರಾಣಿ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬರು ಅಪೆಂಡಿಸೈಟಿಸ್ ತೊಂದರೆಯಿಂದ ಬಳಲುತ್ತಿದ್ದು, ಮಲ್ಲೇಶ್ವರದ ಕೆಪಿಎಸ್ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ತೀವ್ರ ಹೊಟ್ಟೆನೋವಿನಿಂದ ಬಳಲಿದರು. ಆಕೆಗೆ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲು ನಿರ್ಧರಿಸಲಾಗಿದೆ.</p>.<p>* ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಘಟಪ್ರಭಾದ ಕೆ.ಆರ್. ಹುಕ್ಕೇರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಬಂಧಿಕರ ವಾಹನದಲ್ಲಿ ಬರುತ್ತಿದ್ದಾಗ ಅಪಘಾತವಾಗಿ ಸಣ್ಣಪುಟ್ಟ ಗಾಯಗಳಾಗಿದ್ದು, ಮಾನಸಿಕ ಆಘಾತಕ್ಕೊಳಗಾದ ಕಾರಣ ಪೂರಕ ಪರೀಕ್ಷೆ ಬರೆಯಲು ತಿಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಸ್ಸೆಸ್ಸೆಲ್ಸಿ ಸಮಾಜವಿಜ್ಞಾನ ಪರೀಕ್ಷೆ ಬುಧವಾರ ನಡೆದಿದ್ದು, 7,84,287 ವಿದ್ಯಾರ್ಥಿಗಳ ಪೈಕಿ 7,68,341 ಮಂದಿ ಪರೀಕ್ಷೆ ಬರೆಯುವ ಮೂಲಕ ಶೇ 97.96ರಷ್ಟು ಹಾಜರಾತಿ ದಾಖಲಾಗಿದೆ.</p>.<p>‘ಕಳೆದ ವರ್ಷ ಶೇ 98.78 ಹಾಜರಾತಿ ಇತ್ತು. ಕಂಟೈನ್ಮೆಂಟ್ ಪ್ರದೇಶಗಳ 3,363 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡೇತರ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 613 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಅಕ್ರಮಗ<br />ಳಲ್ಲಿ ಭಾಗಿಯಾದ ಯಾವುದೇ ಪ್ರಕರಣಗಳು ನಡೆದಿಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಕೋವಿಡ್ ಕಾರಣಕ್ಕೆ ಇದುವರೆಗೆ 32 ಮಂದಿ ಪರೀಕ್ಷೆ ಬರೆದಿಲ್ಲ. ನೆರೆ ರಾಜ್ಯಗಳಿಂದ 645 ವಿದ್ಯಾರ್ಥಿಗಳ ಪೈಕಿ 593 ಮಂದಿ ಪರೀಕ್ಷೆ ಬರೆದಿದ್ದಾರೆ. 12,644 ವಲಸೆ ವಿದ್ಯಾರ್ಥಿಗಳ ಪೈಕಿ 12,541 ಮಂದಿ ಹಾಜರಾಗಿದ್ದಾರೆ’ ಎಂದು ಸಚಿವರು ತಿಳಿಸಿದರು.</p>.<p>‘ಕೋರ್ ವಿಷಯಗಳ ಪರೀಕ್ಷೆ ಕೊನೆಗೊಂಡಿದೆ. ಗುರುವಾರ ಮತ್ತು ಶುಕ್ರವಾರ ಪ್ರಥಮ ಭಾಷೆ, ತೃತೀಯ ಭಾಷೆ ಪರೀಕ್ಷೆಗಳಿವೆ. ಇವುಗಳ ಯಶಸ್ಸಿಗೂ ಇದೇ ರೀತಿಯ ಬದ್ಧತೆ ಇರಲಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ವ್ಯವಸ್ಥೆ ಮೇಲೆ<br />ವಿಶ್ವಾಸವಿಟ್ಟುಕೊಳ್ಳಬೇಕು’ ಎಂದು ಸಚಿವರು ಮನವಿ ಮಾಡಿದರು.</p>.<p><strong>‘ಫೂಟೇಜ್’ ಪರಿಶೀಲನೆ ಕಡ್ಡಾಯ</strong><br />‘ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರತಿದಿನದ ಪರೀಕ್ಷೆ ಮುಗಿದ ಬಳಿಕ ಸಿಸಿಟಿವಿ ಫೂಟೇಜ್ಗಳನ್ನು ಹಿರಿಯ ಅಧಿಕಾರಿಗಳಿಗೆ ಕಡ್ಡಾಯವಾಗಿ ಸಲ್ಲಿಸಬೇಕು’ ಎಂದು ಸಚಿವ ಸುರೇಶ್ ಕುಮಾರ್ ಎಚ್ಚರಿಸಿದ್ದಾರೆ.</p>.<p>ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಬಂದ್ ಮಾಡಿ ನಕಲು ಮಾಡಿರುವ ಪ್ರಕರಣದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.</p>.<p>‘ಪ್ರಾಥಮಿಕ ವರದಿಯಂತೆ ಅಕ್ರಮ ನಡೆದಿರುವುದು ಗೊತ್ತಾಗಿಲ್ಲ, ಆದರೆ, ಫೂಟೇಜ್ ಅನ್ನು ಮತ್ತೊಮ್ಮೆ ಪರಿಶೀಲಿಸಲಾಗುವುದು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್ ತಿಳಿಸಿದರು.</p>.<p><strong>ಕಾಡಿದಅಪೆಂಡಿಸೈಟಿಸ್ </strong></p>.<p>* ಬೆಂಗಳೂರಿನ ನಿರ್ಮಲಾ ರಾಣಿ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬರು ಅಪೆಂಡಿಸೈಟಿಸ್ ತೊಂದರೆಯಿಂದ ಬಳಲುತ್ತಿದ್ದು, ಮಲ್ಲೇಶ್ವರದ ಕೆಪಿಎಸ್ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ತೀವ್ರ ಹೊಟ್ಟೆನೋವಿನಿಂದ ಬಳಲಿದರು. ಆಕೆಗೆ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲು ನಿರ್ಧರಿಸಲಾಗಿದೆ.</p>.<p>* ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಘಟಪ್ರಭಾದ ಕೆ.ಆರ್. ಹುಕ್ಕೇರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಬಂಧಿಕರ ವಾಹನದಲ್ಲಿ ಬರುತ್ತಿದ್ದಾಗ ಅಪಘಾತವಾಗಿ ಸಣ್ಣಪುಟ್ಟ ಗಾಯಗಳಾಗಿದ್ದು, ಮಾನಸಿಕ ಆಘಾತಕ್ಕೊಳಗಾದ ಕಾರಣ ಪೂರಕ ಪರೀಕ್ಷೆ ಬರೆಯಲು ತಿಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>