<p><strong>ಬೆಂಗಳೂರು:</strong>ಎಸ್ಸೆಸ್ಸೆಲ್ಸಿಪರೀಕ್ಷೆಯಲ್ಲಿ ಹಾಸನ ಹಾಗೂ ರಾಮನಗರರಾಜ್ಯದಲ್ಲಿಮೊದಲ ಎರಡು ಸ್ಥಾನ ಪಡೆಯಲು ಶಿಕ್ಷಣ ಇಲಾಖೆಯ ಸುಧಾರಣಾ ಕ್ರಮಗಳೊಂದಿಗೆ ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರು, ಪೋಷಕರ ಮಾರ್ಗದರ್ಶನವೂ ಕಾರಣ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/hasana/pratham-sthana-barlu-pathni-633352.html" target="_blank">ಹಾಸನಕ್ಕೆ ಪ್ರಥಮ ಸ್ಥಾನ ಬರಲು ರೋಹಿಣಿ ಅಲ್ಲ, ಪತ್ನಿ ಭವಾನಿ ಕಾರಣ: ಸಚಿವ ರೇವಣ್ಣ</a></p>.<p>‘ಹಾಸನ ಮತ್ತು ರಾಮನಗರ ಜಿಲ್ಲೆಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ.ಶಿಕ್ಷಣ ಇಲಾಖೆಯಪರಿಹಾರ ಬೋಧನೆಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದು ಉತ್ತಮ ಫಲಿತಾಂಶಪ್ರಮುಖ ಕಾರಣವಾಗಿದೆ.ಪ್ರತಿ ಶಾಲೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗಮನಿಸಿ, ಅವರಿಗೆ ವಿಶೇಷ ತರಗತಿಗಳನ್ನು ನಡೆಸಲಾಗಿದೆ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಲಿಯುವುದರೊಂದಿಗೆ ಪೋಷಕರೂ ತಮ್ಮ ಮಕ್ಕಳು ಅತ್ಯುತ್ತಮ ಅಂಕ ಗಳಿಸಬೇಕೆಂದು ಅವರಿಗೆ ಒತ್ತಾಸೆಯಾಗಿದ್ದು, ಉತ್ತಮ ಫಲಿತಾಂಶಕ್ಕೆ ಬಂದಿದೆ’ ಎಂದು ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/hasana/hasana-sslc-result-633550.html" target="_blank">ಎಸ್ಸೆಸ್ಸೆಲ್ಸಿ ಫಲಿತಾಂಶ: 7ನೇ ಸ್ಥಾನದಲ್ಲಿದ್ದ ಹಾಸನ 1ನೇ ಸ್ಥಾನಕ್ಕೇರಿದ್ದು ಹೇಗೆ</a></p>.<p>ಈ ಬಾರಿ ಬಹುತೇಕ ಜಿಲ್ಲೆಗಳಲ್ಲಿ ಫಲಿತಾಂಶದಲ್ಲಿ ಸುಧಾರಣೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ 7ನೇ ಸ್ಥಾನಕ್ಕೆ ಕುಸಿದಿದೆ ಎಂದು ವಿಷಾದಿಸಬೇಕಾಗಿಲ್ಲ, ಏಕೆಂದರೆ ಕಳೆದ ವರ್ಷಕ್ಕಿಂತ ಉತ್ತಮ ಫಲಿತಾಂಶ ಇಲ್ಲಿ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಹುತೇಕ ಜಿಲ್ಲೆಗಳ ಶೇಕಡಾವಾರು ಫಲಿತಾಂಶದಲ್ಲಿ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳು ಇನ್ನಷ್ಟು ಉತ್ತಮ ಸಾಧನೆ ತೋರುವ ವಿಶ್ವಾಸವಿದೆ ಎಂದಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/hasana/100-palithamsha-shale-633420.html" target="_blank">ಶಿಕ್ಷಣ ಕ್ಷೇತ್ರದ ಸಾಧನೆಗೆ ದೊಡ್ಡಗೌಡರ ಕೊಡುಗೆ ಜತೆಗೆ ದೈವಾನುಗ್ರಹ ಕಾರಣ: ರೇವಣ್ಣ</a></p>.<p>ಶಾಲೆಯ ಶೇಕಡಾವಾರು ಫಲಿತಾಂಶವಷ್ಟೇ ಅಲ್ಲ, ಕಲಿಕೆಯ ಗುಣಮಟ್ಟವೂ ಅತಿ ಮುಖ್ಯ. ಕಲಿಕೆಯ ಗುಣಮಟ್ಟ ಸುಧಾರಣೆಗೂ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಕರು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಎಸ್ಸೆಸ್ಸೆಲ್ಸಿಪರೀಕ್ಷೆಯಲ್ಲಿ ಹಾಸನ ಹಾಗೂ ರಾಮನಗರರಾಜ್ಯದಲ್ಲಿಮೊದಲ ಎರಡು ಸ್ಥಾನ ಪಡೆಯಲು ಶಿಕ್ಷಣ ಇಲಾಖೆಯ ಸುಧಾರಣಾ ಕ್ರಮಗಳೊಂದಿಗೆ ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರು, ಪೋಷಕರ ಮಾರ್ಗದರ್ಶನವೂ ಕಾರಣ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/hasana/pratham-sthana-barlu-pathni-633352.html" target="_blank">ಹಾಸನಕ್ಕೆ ಪ್ರಥಮ ಸ್ಥಾನ ಬರಲು ರೋಹಿಣಿ ಅಲ್ಲ, ಪತ್ನಿ ಭವಾನಿ ಕಾರಣ: ಸಚಿವ ರೇವಣ್ಣ</a></p>.<p>‘ಹಾಸನ ಮತ್ತು ರಾಮನಗರ ಜಿಲ್ಲೆಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ.ಶಿಕ್ಷಣ ಇಲಾಖೆಯಪರಿಹಾರ ಬೋಧನೆಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದು ಉತ್ತಮ ಫಲಿತಾಂಶಪ್ರಮುಖ ಕಾರಣವಾಗಿದೆ.ಪ್ರತಿ ಶಾಲೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗಮನಿಸಿ, ಅವರಿಗೆ ವಿಶೇಷ ತರಗತಿಗಳನ್ನು ನಡೆಸಲಾಗಿದೆ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಲಿಯುವುದರೊಂದಿಗೆ ಪೋಷಕರೂ ತಮ್ಮ ಮಕ್ಕಳು ಅತ್ಯುತ್ತಮ ಅಂಕ ಗಳಿಸಬೇಕೆಂದು ಅವರಿಗೆ ಒತ್ತಾಸೆಯಾಗಿದ್ದು, ಉತ್ತಮ ಫಲಿತಾಂಶಕ್ಕೆ ಬಂದಿದೆ’ ಎಂದು ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/hasana/hasana-sslc-result-633550.html" target="_blank">ಎಸ್ಸೆಸ್ಸೆಲ್ಸಿ ಫಲಿತಾಂಶ: 7ನೇ ಸ್ಥಾನದಲ್ಲಿದ್ದ ಹಾಸನ 1ನೇ ಸ್ಥಾನಕ್ಕೇರಿದ್ದು ಹೇಗೆ</a></p>.<p>ಈ ಬಾರಿ ಬಹುತೇಕ ಜಿಲ್ಲೆಗಳಲ್ಲಿ ಫಲಿತಾಂಶದಲ್ಲಿ ಸುಧಾರಣೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ 7ನೇ ಸ್ಥಾನಕ್ಕೆ ಕುಸಿದಿದೆ ಎಂದು ವಿಷಾದಿಸಬೇಕಾಗಿಲ್ಲ, ಏಕೆಂದರೆ ಕಳೆದ ವರ್ಷಕ್ಕಿಂತ ಉತ್ತಮ ಫಲಿತಾಂಶ ಇಲ್ಲಿ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಹುತೇಕ ಜಿಲ್ಲೆಗಳ ಶೇಕಡಾವಾರು ಫಲಿತಾಂಶದಲ್ಲಿ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳು ಇನ್ನಷ್ಟು ಉತ್ತಮ ಸಾಧನೆ ತೋರುವ ವಿಶ್ವಾಸವಿದೆ ಎಂದಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/hasana/100-palithamsha-shale-633420.html" target="_blank">ಶಿಕ್ಷಣ ಕ್ಷೇತ್ರದ ಸಾಧನೆಗೆ ದೊಡ್ಡಗೌಡರ ಕೊಡುಗೆ ಜತೆಗೆ ದೈವಾನುಗ್ರಹ ಕಾರಣ: ರೇವಣ್ಣ</a></p>.<p>ಶಾಲೆಯ ಶೇಕಡಾವಾರು ಫಲಿತಾಂಶವಷ್ಟೇ ಅಲ್ಲ, ಕಲಿಕೆಯ ಗುಣಮಟ್ಟವೂ ಅತಿ ಮುಖ್ಯ. ಕಲಿಕೆಯ ಗುಣಮಟ್ಟ ಸುಧಾರಣೆಗೂ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಕರು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>