‘ಏಪ್ರಿಲ್ 29ರಿಂದ ಆರಂಭವಾಗಿರುವ ಕನ್ನಡ ಮಾಧ್ಯಮದ ಪುನರ್ಮನನ ತರಗತಿ ರಾಜ್ಯದ ವಿದ್ಯಾರ್ಥಿ ಸಮೂಹಕ್ಕೆ ಸದ್ಬಳಕೆಯಾಗುತ್ತಿದೆ. ಮುಂದಿನ 30 ದಿನಗಳ ಅವಧಿಯಲ್ಲಿ ಮೊದಲ 16 ದಿನ ಗಣಿತ ಹಾಗೂ ವಿಜ್ಞಾನ, ನಂತರದ 10 ದಿನ ಸಮಾಜ ವಿಜ್ಞಾನ ಬೋಧಿಸಲಾಗುತ್ತದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.