<p><strong>ಬೆಂಗಳೂರು</strong>: ‘ದ್ವಿತೀಯ ಪಿಯು ಇಂಗ್ಲಿಷ್ ವಿಷಯದ ಪರೀಕ್ಷೆಗೆ ನಗರದ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿನಿ ಕ್ವಾರಂಟೈನ್ ಮೊಹರು ಅಳಿಸಿ ಹಾಜರಾಗಿದ್ದಾಳೆಂಬ ಸುದ್ದಿ ಸತ್ಯಕ್ಕೆ ದೂರ. ಈ ವಿದ್ಯಾರ್ಥಿನಿಯ ಕೊರೊನಾ ಪರೀಕ್ಷೆ ‘ನೆಗೆಟಿವ್’ ಬಂದಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯವಿಲ್ಲದೆ ಹಾಜರಾಗಬೇಕು’ ಎಂದುಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶನಿವಾರ ಸ್ಪಷ್ಟಪಡಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿನಿ ಪರೀಕ್ಷೆ ಬರೆದ ಕೊಠಡಿಯಲ್ಲಿ ಇತರ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ. ಯಾರೂ ಕ್ವಾರಂಟೈನ್ಗೆ ಒಳಗಾಗುವ ಅಗತ್ಯವಿಲ್ಲ. ವಿದ್ಯಾರ್ಥಿನಿ ತಂದೆ ಸಹ ಆರೋಗ್ಯ ಇಲಾಖೆಯ ನಿಗಾದಲ್ಲಿದ್ದಾರೆ. ಈ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ’ ಎಂದರು.</p>.<p>‘ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ಯಾವುದೇ ವಿದ್ಯಾರ್ಥಿಯ ಪೋಷಕರು, ಸಂಬಂಧಿಕರು ಕ್ವಾರಂಟೈನ್ಗೆ ಒಳಗಾಗಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಈ ಬಾರಿ ಪರೀಕ್ಷೆಗೆ ಹಾಜರಾಗಲು ವಿನಾಯಿತಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪೂರಕ ಪರೀಕ್ಷೆಯಲ್ಲಿ ಹೊಸ ಅಭ್ಯರ್ಥಿಯಾಗೇ ಇವರನ್ನು ಪರಿಗಣಿಸಲಾಗುವುದು’ ಎಂದರು.</p>.<p>ಬಿಕ್ಕಟ್ಟಿನ ಸಂದರ್ಭದಲ್ಲಿ ಬಹಳ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕಾಗಿದೆ. ನಾವೆಲ್ಲರೂ ಸೇರಿ ಸ್ವಾಸ್ಥ ಸಮಾಜವನ್ನು ನಿರ್ಮಿಸುವ ಕೆಲಸ ಮಾಡಬೇಕಾಗಿದೆ. ಸಮಾಜಕ್ಕೆ ಒಂದು ಸಕಾರಾತ್ಮಕ ಸಂದೇಶ ನೀಡಬೇಕಾಗಿದೆ’ ಎಂದು ವಿನಂತಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ದ್ವಿತೀಯ ಪಿಯು ಇಂಗ್ಲಿಷ್ ವಿಷಯದ ಪರೀಕ್ಷೆಗೆ ನಗರದ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿನಿ ಕ್ವಾರಂಟೈನ್ ಮೊಹರು ಅಳಿಸಿ ಹಾಜರಾಗಿದ್ದಾಳೆಂಬ ಸುದ್ದಿ ಸತ್ಯಕ್ಕೆ ದೂರ. ಈ ವಿದ್ಯಾರ್ಥಿನಿಯ ಕೊರೊನಾ ಪರೀಕ್ಷೆ ‘ನೆಗೆಟಿವ್’ ಬಂದಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯವಿಲ್ಲದೆ ಹಾಜರಾಗಬೇಕು’ ಎಂದುಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶನಿವಾರ ಸ್ಪಷ್ಟಪಡಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿನಿ ಪರೀಕ್ಷೆ ಬರೆದ ಕೊಠಡಿಯಲ್ಲಿ ಇತರ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ. ಯಾರೂ ಕ್ವಾರಂಟೈನ್ಗೆ ಒಳಗಾಗುವ ಅಗತ್ಯವಿಲ್ಲ. ವಿದ್ಯಾರ್ಥಿನಿ ತಂದೆ ಸಹ ಆರೋಗ್ಯ ಇಲಾಖೆಯ ನಿಗಾದಲ್ಲಿದ್ದಾರೆ. ಈ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ’ ಎಂದರು.</p>.<p>‘ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ಯಾವುದೇ ವಿದ್ಯಾರ್ಥಿಯ ಪೋಷಕರು, ಸಂಬಂಧಿಕರು ಕ್ವಾರಂಟೈನ್ಗೆ ಒಳಗಾಗಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಈ ಬಾರಿ ಪರೀಕ್ಷೆಗೆ ಹಾಜರಾಗಲು ವಿನಾಯಿತಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪೂರಕ ಪರೀಕ್ಷೆಯಲ್ಲಿ ಹೊಸ ಅಭ್ಯರ್ಥಿಯಾಗೇ ಇವರನ್ನು ಪರಿಗಣಿಸಲಾಗುವುದು’ ಎಂದರು.</p>.<p>ಬಿಕ್ಕಟ್ಟಿನ ಸಂದರ್ಭದಲ್ಲಿ ಬಹಳ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕಾಗಿದೆ. ನಾವೆಲ್ಲರೂ ಸೇರಿ ಸ್ವಾಸ್ಥ ಸಮಾಜವನ್ನು ನಿರ್ಮಿಸುವ ಕೆಲಸ ಮಾಡಬೇಕಾಗಿದೆ. ಸಮಾಜಕ್ಕೆ ಒಂದು ಸಕಾರಾತ್ಮಕ ಸಂದೇಶ ನೀಡಬೇಕಾಗಿದೆ’ ಎಂದು ವಿನಂತಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>