ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಲಿಕಾರ್ಜುನ ಸ್ಪರ್ಧೆ: ಶಾಮನೂರು

Last Updated 17 ಮಾರ್ಚ್ 2019, 17:57 IST
ಅಕ್ಷರ ಗಾತ್ರ

ದಾವಣಗೆರೆ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಅವರೇ ಸ್ಪರ್ಧಿಸಲಿದ್ದಾರೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಸ್ಪಷ್ಟಪಡಿಸಿದರು.

ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಶಾಮನೂರು, ‘ಚುನಾವಣೆಗೆ ನಿಲ್ಲುವುದಾಗಿ ಮಲ್ಲಿಕಾರ್ಜುನ ಹೇಳಿದ್ದಾರೆ. ಪಕ್ಷದ ಟಿಕೆಟ್‌ ಅವರಿಗೆ ಕೊಡುತ್ತಾರೆ. ಅವರೇ ಗೆಲ್ಲುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆಗೆ ಯಾರು ನಿಲ್ಲುತ್ತಾರೆ ಎಂಬ ಗೊಂದಲ ಕಾಂಗ್ರೆಸ್‌ ಕಾರ್ಯಕರ್ತರಲ್ಲಿದೆ ಎಂಬ ಬಗ್ಗೆ ಗಮನ ಸೆಳೆದಾಗ, ‘ಯಾರು ಸ್ಪರ್ಧಿಸುತ್ತಾರೆ ಎಂದು ಕಾರ್ಯಕರ್ತರಿಗೆಲ್ಲ ಗೊತ್ತಿದೆ. ಪಕ್ಷದ ಪರ ಪ್ರಚಾರ ಇದ್ದೇ ಇದೆ. ಜನ ವೋಟ್ ಕೊಡಲು ತಯಾರಿದ್ದಾರೆ. ಅವರಿಗೆ ಕಾಂಗ್ರೆಸ್‌ ಬಗ್ಗೆ ಅಭಿಮಾನ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT