ಬೆಂಗಳೂರು:ದಿನೇಶ್ ಗುಂಡೂರಾವ್ ಅವರು ಸಿದ್ದರಾಮಯ್ಯ ಅವರ ಬಕೆಟ್ ಎಂಬ ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆಯನ್ನು ಇನ್ನೊಬ್ಬ ಅನರ್ಹ ಶಾಸಕ ಎಂ.ಟಿ.ಬಿ. ನಾಗರಾಜ್ ಸಮರ್ಥಿಸಿದ್ದಾರೆ.
ದಿನೇಶ್ ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡುವಲ್ಲಿ ಸೋತಿದ್ದಾರೆ. ಕೋಲಾರದಲ್ಲಿ ಮುನಿಯಪ್ಪ ಸೋಲಿಗೆ ಕಾರಣರಾದ ರಮೇಶ್ ಕುಮಾರ್ ವಿರುದ್ಧ ಇವರು ಯಾವ ಕ್ರಮ ಕೈಗೊಂಡಿದ್ದಾರೆ ಎಂದು ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಸೋಮಶೇಖರ್ ಅವರು ದಿನೇಶ್ ಬಗ್ಗೆ ಆಡಿದ ಮಾತು ಸರಿಯಾಗಿಯೇ ಇದೆ ಎಂದು ಹೇಳಿದರು.