<p><strong>ನವದೆಹಲಿ: </strong>’ಕರ್ನಾಟಕ ಬಿಜೆಪಿ ಘಟಕದಲ್ಲಿ ಯಾವುದೇ ರೀತಿ ಅಸಮಾಧಾನ ಇಲ್ಲ. ರಾಜ್ಯ ಅಥವಾ ಕೇಂದ್ರದಲ್ಲಿಎಲ್ಲ ನಾಯಕರಿಗೂ ಸೂಕ್ತ ಸ್ಥಾನಮಾನಗಳನ್ನು ಕಲ್ಪಿಸಲಾಗುವುದು‘ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಮುರಳಿಧರ್ ರಾವ್ ಇಲ್ಲಿ ತಿಳಿಸಿದರು.</p>.<p>’ಮುಂದಿನ ತಿಂಗಳು ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ವಿಧಾನಸಭೆ ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಸಚಿವ ಸ್ಥಾನ ನೀಡಲಾಗುವುದು‘ ಎಂದು ತಿಳಿಸಿದರು.</p>.<p>’ಕರ್ನಾಟಕದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹೀಗಾಗಿ, ಸಹಜವಾಗಿಯೇ ಎಲ್ಲರೂ ಪ್ರಮುಖ ಹುದ್ದೆಗಳನ್ನು ಬಯಸುತ್ತಾರೆ. ಪ್ರತಿಯೊಬ್ಬರಿಗೂ ಅವಕಾಶ ನೀಡಲಾಗುವುದು‘ ಎಂದರು.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಉತ್ತರಾಧಿಕಾರಿ ಯಾರು ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ’ಯಡಿಯೂರಪ್ಪ ಅವರ ವಯಸ್ಸಿನ ಬಗ್ಗೆ ಬಿಜೆಪಿಗೆ ಗೊತ್ತಿದೆ. ಆದರೆ, ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಈ ಬಗ್ಗೆಅನುಮಾನ ಬೇಡ. ಉಳಿದ ಅವಧಿಯನ್ನು ಅವರೇ ಪೂರ್ಣಗೊಳಿಸುತ್ತಾರೆ. ಯಡಿಯೂರಪ್ಪ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ‘ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>’ಕರ್ನಾಟಕದಲ್ಲಿನ ಭವಿಷ್ಯದ ನಾಯಕರ ಬಗ್ಗೆ ಬಿಜೆಪಿಗೆ ಆತಂಕ ಇಲ್ಲ. ಎಲ್ಲ ಪ್ರದೇಶಗಳ ಮತ್ತು ಸಮುದಾಯಗಳ ಹಲವು ನಾಯಕರು ಪಕ್ಷದಲ್ಲಿದ್ದಾರೆ. ಆರರಿಂದ ಏಳು ಬಾರಿ ಗೆದ್ದ ಹಲವು ಶಾಸಕರಿದ್ದಾರೆ. ಹೀಗಾಗಿ, ನಾಯಕತ್ವದ ಕೊರತೆ ಇಲ್ಲ‘ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>’ಕರ್ನಾಟಕ ಬಿಜೆಪಿ ಘಟಕದಲ್ಲಿ ಯಾವುದೇ ರೀತಿ ಅಸಮಾಧಾನ ಇಲ್ಲ. ರಾಜ್ಯ ಅಥವಾ ಕೇಂದ್ರದಲ್ಲಿಎಲ್ಲ ನಾಯಕರಿಗೂ ಸೂಕ್ತ ಸ್ಥಾನಮಾನಗಳನ್ನು ಕಲ್ಪಿಸಲಾಗುವುದು‘ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಮುರಳಿಧರ್ ರಾವ್ ಇಲ್ಲಿ ತಿಳಿಸಿದರು.</p>.<p>’ಮುಂದಿನ ತಿಂಗಳು ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ವಿಧಾನಸಭೆ ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಸಚಿವ ಸ್ಥಾನ ನೀಡಲಾಗುವುದು‘ ಎಂದು ತಿಳಿಸಿದರು.</p>.<p>’ಕರ್ನಾಟಕದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹೀಗಾಗಿ, ಸಹಜವಾಗಿಯೇ ಎಲ್ಲರೂ ಪ್ರಮುಖ ಹುದ್ದೆಗಳನ್ನು ಬಯಸುತ್ತಾರೆ. ಪ್ರತಿಯೊಬ್ಬರಿಗೂ ಅವಕಾಶ ನೀಡಲಾಗುವುದು‘ ಎಂದರು.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಉತ್ತರಾಧಿಕಾರಿ ಯಾರು ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ’ಯಡಿಯೂರಪ್ಪ ಅವರ ವಯಸ್ಸಿನ ಬಗ್ಗೆ ಬಿಜೆಪಿಗೆ ಗೊತ್ತಿದೆ. ಆದರೆ, ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಈ ಬಗ್ಗೆಅನುಮಾನ ಬೇಡ. ಉಳಿದ ಅವಧಿಯನ್ನು ಅವರೇ ಪೂರ್ಣಗೊಳಿಸುತ್ತಾರೆ. ಯಡಿಯೂರಪ್ಪ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ‘ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>’ಕರ್ನಾಟಕದಲ್ಲಿನ ಭವಿಷ್ಯದ ನಾಯಕರ ಬಗ್ಗೆ ಬಿಜೆಪಿಗೆ ಆತಂಕ ಇಲ್ಲ. ಎಲ್ಲ ಪ್ರದೇಶಗಳ ಮತ್ತು ಸಮುದಾಯಗಳ ಹಲವು ನಾಯಕರು ಪಕ್ಷದಲ್ಲಿದ್ದಾರೆ. ಆರರಿಂದ ಏಳು ಬಾರಿ ಗೆದ್ದ ಹಲವು ಶಾಸಕರಿದ್ದಾರೆ. ಹೀಗಾಗಿ, ನಾಯಕತ್ವದ ಕೊರತೆ ಇಲ್ಲ‘ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>