ಬೆಂಗಳೂರು: ‘ಕರ್ನಾಟಕದಲ್ಲಿ ನಿತ್ಯ 3,000 ಕೆ.ಜಿಯಷ್ಟು ಕೊರೊನಾ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಮಾಸ್ಕ್, ಪಿಪಿಇ ಕಿಟ್, ಕೈ ಗವುಸುಗಳು ಇದರ ಮೂಲ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
’ಈ ತ್ಯಾಜ್ಯದ ವಿಲೇವಾರಿ ವೈಜ್ಞಾನಿಕವಾಗಿ ಆಗಬೇಕು. ಆದರೆ, ಅದು ಕ್ಲಿಷ್ಟಕರ ಕೂಡಾ. ಈ ತ್ಯಾಜ್ಯ ಕಡಿಮೆ ಮಾಡಲು ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮರು ಬಳಕೆಯ ಮಾಸ್ಕ್ ಬಳಕೆ ರೂಡಿಸಿಕೊಳ್ಳಬೇಕು’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕರ್ನಾಟಕದಲ್ಲಿ ದಿನಂಪ್ರತಿ 3000 ಕೆಜಿ ಯಷ್ಟು ಕೊರೊನ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ.ಮಾಸ್ಕ್ , ಪಿಪಿಇ ಕಿಟ್ ,ಕೈ ಗವುಸುಗಳು ಇದರ ಮೂಲ.ಈ ತ್ಯಾಜ್ಯದ ವಿಲೇವಾರಿ ವೈಜ್ಞಾನಿಕವಾಗಿ ಆಗಬೇಕು ಅದು ಕ್ಲಿಷ್ಟಕರ ಕೂಡಾ ,ಈ ತ್ಯಾಜ್ಯಕಡಿಮೆ ಮಾಡಲು ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮರು ಬಳಕೆಯ ಮಾಸ್ಕ್ ಬಳಕೆಯನ್ನು ರೂಡಿಸಿಕೊಳ್ಳಬೇಕು ಎಂದು ಮನವಿ