ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರ ಕಳ್ಳತನ, ದರೋಡೆ ಮಾಡಿಯಾದರೂ ಹಣ ತಂದು ನೆರೆಸಂತ್ರಸ್ತರಿಗೆ ನೀಡಲಿ: ಮೊಯಿಲಿ

ನೆರೆ ಸಂತ್ರಸ್ತರಿಗೆ ಪರಿಹಾರ ನೀಡಿಕೆ: ವೀರಪ್ಪ ಮೊಯಿಲಿ ಪ್ರತಿಪಾದನೆ
Last Updated 2 ನವೆಂಬರ್ 2019, 13:02 IST
ಅಕ್ಷರ ಗಾತ್ರ

ಬಾಗಲಕೋಟೆ: ‘ರಾಜ್ಯ ಸರ್ಕಾರ ನೆರೆ ಸಂತ್ರಸ್ತರಿಗೆ ಎಲ್ಲಿಯಾದರೂ ಕದ್ದು, ದರೋಡೆ ಮಾಡಿಯಾದರೂ ಹಣ ತಂದು ಪರಿಹಾರ ಕೊಡಲಿ‘ ಎಂದು ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯಿಲಿ ಒತ್ತಾಯಿಸಿದರು.

ಬಾದಾಮಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ನೆರೆಯಿಂದ ಈಗ ಸಂತ್ರಸ್ತರಾದವರಿಗೆ ಪರಿಹಾರ ಕೊಟ್ಟಿಲ್ಲ. ಬದಲಿಗೆ ಹಳೆಯ ಬಾಕಿ ₹1200 ಕೋಟಿ ಬಿಡುಗಡೆ ಮಾಡಿದೆ. ಅದೂ ಕೂಡ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ ಎಂದು ಟೀಕಿಸಿದರು.‘ಮುಖ್ಯಮಂತ್ರಿ ಯಡಿಯೂರಪ್ಪ ಕರುಣಾಜನಕ ಸ್ಥಿತಿಯಲ್ಲಿದ್ದಾರೆ. ರಾಜ್ಯದ ಬೊಕ್ಕಸ ಖಾಲಿಯಾಗಿದೆ. ಅವರಾದರೂ ಹಣ ಎಲ್ಲಿಂದ ತರ್ತಾರೆ. ನರೇಂದ್ರಮೋದಿ, ಅಮಿತ್ ಷಾ ಅವರ ಮಾತು ಕೇಳುತ್ತಿಲ್ಲ. ಭೇಟಿಗೂ ಅವಕಾಶ ನೀಡುತ್ತಿಲ್ಲ. ಹೀಗಾಗಿ ಯಡಿಯೂರಪ್ಪ ಅವರ ಪರಿಸ್ಥಿತಿ ಹುಚ್ಚರಂತಾಗಿದೆ. ಕೇಂದ್ರದ ಬಿಜೆಪಿ ನಾಯಕರಿಗೂ ಅದೇ ಬೇಕಿದೆ. ಹೀಗಾದರೆ ಯಡಿಯೂರಪ್ಪ ಅವರನ್ನು ಬೀದಿಗೆ ತಳ್ಳಿ ಬೇರೆಯವರನ್ನು ಅಧಿಕಾರಕ್ಕೆ ತರಬಹುದು ಎಂಬ ಸಂಚು ನಡೆಯುತ್ತಿದೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT