<p><strong>ಕೆಂಗೇರಿ: </strong>'ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯವನ್ನು ಸರಿಗಟ್ಟುವ ರಾಜ್ಯ ದೇಶದಲ್ಲಿ ಮತ್ತೊಂದಿಲ್ಲ' ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ತಾಂತ್ರಿಕ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಎಂ.ಎಚ್.ಜಯಪ್ರಕಾಶ್ ನಾರಾಯಣ್ ಅವರ 93ನೇ ಹುಟ್ಟು ಹಬ್ಬ ಮತ್ತು ಸಂಸ್ಥಾಪಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯವು ಪಾರಮ್ಯ ಮೆರೆದಿದೆ. ಶೇ 44ಕ್ಕೂ ಹೆಚ್ಚು ನುರಿತ ತಂತ್ರಜ್ಞಾನರು ತಮ್ಮ ಕಾರ್ಯಸ್ಥಾನವನ್ನಾಗಿ ರಾಜ್ಯವನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದು, ಬೆಂಗಳೂರು ತಂತ್ರಜ್ಞಾನ ಪರಿಣಿತರ ಮೊದಲ ಆಯ್ಕೆ ಆಗಿ ಪರಿವರ್ತನೆಗೊಂಡಿದೆ ಎಂದು ಹೇಳಿದರು.</p>.<p>‘ಪ್ರಸ್ತುತ ಅಗತ್ಯ ಹಾಗೂ ಕಾಲಘಟ್ಟಕ್ಕೆ ತಕ್ಕಂತೆ ಶೈಕ್ಷಣಿಕ ಪದ್ಧತಿಗಳು ಬದಲಾಗಬೇಕಾಗುತ್ತದೆ. ಈ ನಿಟ್ಟಿನಲ್ಲಿ ಹಲವಾರು ಆಧುನಿಕ ಚಿಂತನೆಗಳು ಮುನ್ನೆಲೆಗೆ ಬರುತ್ತವೆ. ಧನಾತ್ಮಕ ಚಿಂತನೆಗಳಿಗೆ ವೇದಿಕೆ ಕಲ್ಪಿಸಿ ಸಾಕಾರಗೊಳಿಸಬೇಕಾಗಿರುವುದು ಅವಶ್ಯಕ’ ಎಂದು ಹೇಳಿದರು.</p>.<p>ಪಾಂಚಜನ್ಯ ವಿದ್ಯಾಪೀಠ ಕಲ್ಯಾಣ ದತ್ತಿ ಕಾರ್ಯದರ್ಶಿ ಡಾ.ಎಂ.ಮಹಾದೇವ ಮಾತನಾಡಿ, ‘ಸುಮಾರು 50 ಸಾವಿರ ವಿದ್ಯಾರ್ಥಿಗಳು ಈ ಶಿಕ್ಷಣ ಸಂಸ್ಥೆ ಮೂಲಕ ಪದವಿ ಪಡೆದಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ’ ಎಂದರು.</p>.<p>‘ಮುಂದಿನ ಸಂಸ್ಥಾಪನಾ ದಿನದಂದು ದೇಶದ ವಿವಿಧ ಭಾಗಗಳ ತಂತ್ರಜ್ಞರು ಹಾಗೂ ಕುಶಲಕರ್ಮಿಗಳನ್ನು ಒಂದುಗೂಡಿಸಿ ಕಾಲೇಜಿನಲ್ಲಿ ಕಾರ್ಯಾಗಾರ ನಡೆಸಲು ಚಿಂತನೆ ನಡೆಸಲಾಗಿದೆ’ ಎಂದು ಪ್ರಾಂಶುಪಾಲ ಡಾ.ಸಿ.ನಂಜುಂಡಸ್ವಾಮಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ: </strong>'ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯವನ್ನು ಸರಿಗಟ್ಟುವ ರಾಜ್ಯ ದೇಶದಲ್ಲಿ ಮತ್ತೊಂದಿಲ್ಲ' ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ತಾಂತ್ರಿಕ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಎಂ.ಎಚ್.ಜಯಪ್ರಕಾಶ್ ನಾರಾಯಣ್ ಅವರ 93ನೇ ಹುಟ್ಟು ಹಬ್ಬ ಮತ್ತು ಸಂಸ್ಥಾಪಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯವು ಪಾರಮ್ಯ ಮೆರೆದಿದೆ. ಶೇ 44ಕ್ಕೂ ಹೆಚ್ಚು ನುರಿತ ತಂತ್ರಜ್ಞಾನರು ತಮ್ಮ ಕಾರ್ಯಸ್ಥಾನವನ್ನಾಗಿ ರಾಜ್ಯವನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದು, ಬೆಂಗಳೂರು ತಂತ್ರಜ್ಞಾನ ಪರಿಣಿತರ ಮೊದಲ ಆಯ್ಕೆ ಆಗಿ ಪರಿವರ್ತನೆಗೊಂಡಿದೆ ಎಂದು ಹೇಳಿದರು.</p>.<p>‘ಪ್ರಸ್ತುತ ಅಗತ್ಯ ಹಾಗೂ ಕಾಲಘಟ್ಟಕ್ಕೆ ತಕ್ಕಂತೆ ಶೈಕ್ಷಣಿಕ ಪದ್ಧತಿಗಳು ಬದಲಾಗಬೇಕಾಗುತ್ತದೆ. ಈ ನಿಟ್ಟಿನಲ್ಲಿ ಹಲವಾರು ಆಧುನಿಕ ಚಿಂತನೆಗಳು ಮುನ್ನೆಲೆಗೆ ಬರುತ್ತವೆ. ಧನಾತ್ಮಕ ಚಿಂತನೆಗಳಿಗೆ ವೇದಿಕೆ ಕಲ್ಪಿಸಿ ಸಾಕಾರಗೊಳಿಸಬೇಕಾಗಿರುವುದು ಅವಶ್ಯಕ’ ಎಂದು ಹೇಳಿದರು.</p>.<p>ಪಾಂಚಜನ್ಯ ವಿದ್ಯಾಪೀಠ ಕಲ್ಯಾಣ ದತ್ತಿ ಕಾರ್ಯದರ್ಶಿ ಡಾ.ಎಂ.ಮಹಾದೇವ ಮಾತನಾಡಿ, ‘ಸುಮಾರು 50 ಸಾವಿರ ವಿದ್ಯಾರ್ಥಿಗಳು ಈ ಶಿಕ್ಷಣ ಸಂಸ್ಥೆ ಮೂಲಕ ಪದವಿ ಪಡೆದಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ’ ಎಂದರು.</p>.<p>‘ಮುಂದಿನ ಸಂಸ್ಥಾಪನಾ ದಿನದಂದು ದೇಶದ ವಿವಿಧ ಭಾಗಗಳ ತಂತ್ರಜ್ಞರು ಹಾಗೂ ಕುಶಲಕರ್ಮಿಗಳನ್ನು ಒಂದುಗೂಡಿಸಿ ಕಾಲೇಜಿನಲ್ಲಿ ಕಾರ್ಯಾಗಾರ ನಡೆಸಲು ಚಿಂತನೆ ನಡೆಸಲಾಗಿದೆ’ ಎಂದು ಪ್ರಾಂಶುಪಾಲ ಡಾ.ಸಿ.ನಂಜುಂಡಸ್ವಾಮಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>