‘ವಾಲ್ಮೀಕಿ - ಹಾಲುಮತ ಸಮುದಾಯ ಒಂದಾದರೆ ಸತೀಶ ಜಾರಕಿಹೊಳಿ ಸಿಎಂ ಆಗಲು ಸಾಧ್ಯ’

ಹರಿಹರ: ಹಾಲುಮತ ಹಾಗೂ ವಾಲ್ಮೀಕಿ ಸಮುದಾಯ ಒಂದಾದರೆ ರಾಜ್ಯದ ಈ ಸಮುದಾಯದವರು ರಾಜ್ಯದ ಚುಕ್ಕಾಣಿ ಹಿಡಿಯಬಹುದು. ಮುಂದಿನ ದಿನಗಳಲ್ಲಿ ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು.
ಹರಿಹರದ ರಾಜನಹಳ್ಳಿಯಲ್ಲಿ ಶನಿವಾರ ನಡೆದ ವಾಲ್ಮೀಕಿ ಜಾತ್ರೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಇದನ್ನೂ ಓದಿ... ಯಡಿಯೂರಪ್ಪನವರೇ ಇದು ನಿಮಗೆ ಕಟ್ಟ ಕಡೆಯ ಎಚ್ಚರಿಕೆ: ನಿರಂಜನಾನಂದಪುರಿ ಸ್ವಾಮೀಜಿ
ಈ ಎರಡು ಸಮಾಜದ ಮುಖಂಡರು ಮನಸ್ತಾಪವನ್ನು ನಾಲ್ಕು ಗೋಡೆಗಳ ನಡುವೆ ಕುಳಿತು ಬಗೆಹರಿಸಿಕೊಳ್ಳಬೇಕು. ಆಗ ಸಾಮಾಜಿಕ ಹಾಗೂ ರಾಜಕೀಯ ನ್ಯಾಯ ಪಡೆಯಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.
ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಆರಂಭಿಸದ ವಾಲ್ಮೀಕಿ ತೇರಿಗೆ ಸಮಾಜದ ನಾಯಕರು ಚಕ್ರಗಳಾಗಬೇಕು ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.