ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎನ್ನುತ್ತೀರ ಮುಂದೆ ಸಿಎಂ ಆದರೆ ಹತ್ತು ಕೆಜಿ ಅಕ್ಕಿನೀಡುತ್ತೇನೆ ಎಂದೂ ಹೇಳುತ್ತೀರ ಇದು ಗೊಂದಲ ಅಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,‘ಸಾರ್ವಜನಿಕ ಸಭೆಗಳಲ್ಲಿ ಅಭಿಮಾನಿಗಳು ನೀವೇ ಮುಖ್ಯಮಂತ್ರಿ ಆಗಬೇಕು ಎಂದಾಗ, ಸಾಂದರ್ಭಿಕವಾಗಿ ಪ್ರತಿಕ್ರಿಯೆ ನೀಡಿದ್ದೇನೆ. ಜನರು ಆಶೀರ್ವಾದ ಮಾಡಿದರೆ ಸಿಎಂ ಆಗಬಾರದೇಕೆ’ ಎಂದು ಪ್ರಶ್ನಿಸಿದರು.