<p><strong>ಹುಬ್ಬಳ್ಳಿ:</strong> ಸಮ್ಮಿಶ್ರ ಸರ್ಕಾರದ ಪತನಕ್ಕಾಗಿ ಸಿದ್ದರಾಮಯ್ಯ ಅವರೇ ಟೈಂ ಬಾಂಬ್ ಇಟ್ಟಿದ್ದು, ಇದೇ 23ರ ನಂತರ ಅದು ಸ್ಫೋಟಗೊಳ್ಳಲಿದೆ ಎಂದು ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾಗಬೇಕು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಯ ಹಿಂದೆ ಇರುವುದು ಸಿದ್ದರಾಮಯ್ಯ. ಕುಮಾರಸ್ವಾಮಿ ಅವರನ್ನು ಕುರ್ಚಿಯಿಂದ ಕೆಳಗಿಳಿಸಿ ಹೇಗಾದರೂ ಮಾಡಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಆಗಬೇಕೆಂದು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ಗೋಪ್ಯ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದರು.</p>.<p>ಮಂಡ್ಯದಲ್ಲಿ ಸುಮಲತಾ ಅವರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುಂತೆ ಮಾಡಿದ್ದು ಸಹ ಸಿದ್ದರಾಮಯ್ಯ. ಚಲುವರಾಯಸ್ವಾಮಿ ಹೇಳಿಕೆ ಹಿಂದೆ ಇರುವುದು ಸಹ ಅವರೇ. ಈಗ ಎರಡೂ ಪಕ್ಷಗಳ ಒಳ ಬೇಗುದಿ ಹೊರಗೆ ಬಂದಿದೆ ಎಂದರು.</p>.<p>ಚುನಾವಣೆಯಲ್ಲಿ ಸೋಲುತ್ತೇವೆ ಎಂದು ಗೊತ್ತಾದಾಗ ದೇವೇಗೌಡರು, ಕುಮಾರಸ್ವಾಮಿ ಅಳುತ್ತಾರೆ. ಒಂದು ವರ್ಷದಿಂದ ಅವರ ಸಹವಾಸ ಮಾಡಿರುವ ಡಿ.ಕೆ. ಶಿವಕುಮಾರ್ ಸಹ ಅಳುವುದನ್ನು ಕಲಿತಿದ್ದಾರೆ ಎಂದು ವ್ಯಂಗ್ಯವಾಡಿದರು.</p>.<p>ಸಚಿವ ರೇವಣ್ಣ ಅವರ ಬೆಂಗಾವಲು ವಾಹನದಲ್ಲಿ ಹಣ ಸಿಕ್ಕ ಪ್ರಕರಣದ ವಿಡಿಯೊ ಡಿಲಿಟ್ ಆಗಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಆ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಸಮ್ಮಿಶ್ರ ಸರ್ಕಾರದ ಪತನಕ್ಕಾಗಿ ಸಿದ್ದರಾಮಯ್ಯ ಅವರೇ ಟೈಂ ಬಾಂಬ್ ಇಟ್ಟಿದ್ದು, ಇದೇ 23ರ ನಂತರ ಅದು ಸ್ಫೋಟಗೊಳ್ಳಲಿದೆ ಎಂದು ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾಗಬೇಕು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಯ ಹಿಂದೆ ಇರುವುದು ಸಿದ್ದರಾಮಯ್ಯ. ಕುಮಾರಸ್ವಾಮಿ ಅವರನ್ನು ಕುರ್ಚಿಯಿಂದ ಕೆಳಗಿಳಿಸಿ ಹೇಗಾದರೂ ಮಾಡಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಆಗಬೇಕೆಂದು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ಗೋಪ್ಯ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದರು.</p>.<p>ಮಂಡ್ಯದಲ್ಲಿ ಸುಮಲತಾ ಅವರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುಂತೆ ಮಾಡಿದ್ದು ಸಹ ಸಿದ್ದರಾಮಯ್ಯ. ಚಲುವರಾಯಸ್ವಾಮಿ ಹೇಳಿಕೆ ಹಿಂದೆ ಇರುವುದು ಸಹ ಅವರೇ. ಈಗ ಎರಡೂ ಪಕ್ಷಗಳ ಒಳ ಬೇಗುದಿ ಹೊರಗೆ ಬಂದಿದೆ ಎಂದರು.</p>.<p>ಚುನಾವಣೆಯಲ್ಲಿ ಸೋಲುತ್ತೇವೆ ಎಂದು ಗೊತ್ತಾದಾಗ ದೇವೇಗೌಡರು, ಕುಮಾರಸ್ವಾಮಿ ಅಳುತ್ತಾರೆ. ಒಂದು ವರ್ಷದಿಂದ ಅವರ ಸಹವಾಸ ಮಾಡಿರುವ ಡಿ.ಕೆ. ಶಿವಕುಮಾರ್ ಸಹ ಅಳುವುದನ್ನು ಕಲಿತಿದ್ದಾರೆ ಎಂದು ವ್ಯಂಗ್ಯವಾಡಿದರು.</p>.<p>ಸಚಿವ ರೇವಣ್ಣ ಅವರ ಬೆಂಗಾವಲು ವಾಹನದಲ್ಲಿ ಹಣ ಸಿಕ್ಕ ಪ್ರಕರಣದ ವಿಡಿಯೊ ಡಿಲಿಟ್ ಆಗಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಆ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>