ಹುಬ್ಬಳ್ಳಿ: ‘ಸರ್ಕಾರ ಬೀಳುತ್ತದೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಕಾಂಗ್ರೆಸ್ನವರು ಸಿದ್ದರಾಮಯ್ಯ ಸಿಎಂ ಅಗಲಿ ಎನ್ನುತ್ತಾರೆ. ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗಲಿ ಎನ್ನುವುದು ಜನಾಭಿಪ್ರಾಯವಾಗಿದೆ’ ಎಂದು ವಿಧಾನ ಪರಿಷತ್ ಬಸವರಾಜ ಹೊರಟ್ಟಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಗಲಾದರೂ ಎರಡು ಪಕ್ಷಗಳು ಒಂದಾಗಿ ಕೆಲಸ ಮಾಡಿಕೊಂಡು ಹೋಗಬೇಕು ಎಂಬ ಉದ್ದೇಶದಿಂದ ಹೇಳಿದ್ದೇನೆ’ ಎಂದರು.
ಭಿನ್ನಾಭಿಪ್ರಾಯಗಳಿದ್ದರೆ ಬಹಿರಂಗವಾಗಿ ಯಾಕೆ ಹೇಳಿಕೆ ನೋಡಬೇಕು. ಸಮನ್ವಯ ಸಮಿತಿಯಲ್ಲಿ ಮಾತನಾಡಲಿ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.