ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಪೀಡಿತ 51 ಗ್ರಾಮಗಳನ್ನು ಸ್ಥಳಾಂತರಿಸಲು 2009ರಲ್ಲಿಯೇ ಕ್ರಮ ಕೈಗೊಳ್ಳಲಾಗಿತ್ತು. 1,138 ಮನೆಗಳ ನಿರ್ಮಾಣಕ್ಕೆ ಆದೇಶಿಸಲಾಗಿತ್ತು. ಅದರಲ್ಲಿ ಅರ್ಧಕ್ಕಿಂತಲೂ ಹೆಚ್ಚು ಮನೆಗಳ ನಿರ್ಮಾಣ ಬಾಕಿ ಇವೆ. ಈಗಾಗಲೇ ನಿರ್ಮಾಣ ಮಾಡಿರುವ ಪುನರ್ವಸತಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಮಾಡುವುದಕ್ಕೆ ಈಗ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.