ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ವಿರುದ್ಧ ಬಹಿರಂಗ ಹೇಳಿಕೆ: ಆರು ಕೊರೊನಾ ವಾರಿಯರ್ಸ್‌ ಅಮಾನತು

Last Updated 12 ಮೇ 2020, 14:58 IST
ಅಕ್ಷರ ಗಾತ್ರ

ಶಿವಮೊಗ್ಗ: ಕೋವಿಡ್-19 ರೋಗಿಗಳ ಆರೈಕೆಯಲ್ಲಿ ತೊಡಗಿರುವ ಮೆಗ್ಗಾನ್ ಕೇಂದ್ರದ ಆರು ಸಿಬ್ಬಂದಿಯನ್ನುಅಮಾನತು ಮಾಡಲಾಗಿದೆ.

ಶುಶ್ರೂಷಕಿಯರಾದ ಚೇತನ ಕುಮಾರಿ, ಪವಿತ್ರಾ, ಭಾವನಾ, ಪುರುಷ ಶುಶ್ರೂಷಕ ರವಿ, ಡಿ ಗ್ರೂಪ್‌ ನೌಕರರಾದ ಪದ್ಮರಾಜ್, ಅರುಣ ಅಮಾನತುಗೊಂಡವರು.

ಜಿಲ್ಲೆಯಲ್ಲಿ ಮೊದಲ ಬಾರಿ ಪತ್ತೆಯಾದ 8 ಮಂದಿ ಕೋವಿಡ್-19‌ ರೋಗಿಗಳ ಆರೈಕೆಯಲ್ಲಿ ಇರುವ ಸಿಬ್ಬಂದಿ ಮನೆಗೆ ತೆರಳದೇ ಅಲ್ಲೇ ವಾಸ್ತವ್ಯ ಮಾಡಬೇಕಿದೆ. ಮೊದಲ 7 ದಿನಗಳು ರೋಗಿಗಳ ಆರೈಕೆಗೆ ನಿಯೋಜಿತವಾಗಿರುವ ತಂಡಕ್ಕೆ ಮೆಗ್ಗಾನ್ ಆಸ್ಪ‍ತ್ರೆಯ ಆವರಣದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ ಉಳಿದುಕೊಳ್ಳಲು ಸೂಚಿಸಲಾಗಿತ್ತು. ಅಲ್ಲಿ ನೀರಿನ ವ್ಯವಸ್ಥೆ ಇಲ್ಲದ ಕಾರಣ ಕುವೆಂಪು ರಸ್ತೆಯ ಖಾಸಗಿ ವಸತಿ ಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಅಲ್ಲೂ ಊಟ, ವಸತಿ ಸೌಕರ್ಯಗಳು ಇಲ್ಲವೆಂದು ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಿದ್ದರು. ಅವರ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.

ಸರ್ಕಾರದ ವಿರುದ್ಧ ಬಹಿರಂಗ ಹೇಳಿಕೆ ನೀಡಿದ ಕಾರಣ ಈ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಗುರುಪಾದಪ್ಪ ಅಮಾನತು ಮಾಡಿದ್ದಾರೆ.

ಸಂಘದ ವಿರೋಧ: ಸೌಕರ್ಯ ಕೇಳಿದವರನ್ನುಅಮಾನತು ಮಾಡಿದ ನಿರ್ದೇಶಕರ ನಿರ್ಧಾರ ಖಂಡಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಆರೋಗ್ಯ ನೌಕರರ ಸಂಘದ ಅಧ್ಯಕ್ಷ ಮಾ.ಸ.ನಂಜುಂಡ ಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಿತು. ಅಮಾನತು ಆದೇಶ ಹಿಂಪಡೆಯದಿದ್ದರೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT