ರಾಜರಾಜೇಶ್ವರಿ ನಗರ ಕ್ಷೇತ್ರದ ಮುನಿರತ್ನ, ಕೆ.ಆರ್.ಪುರದ ಬೈರತಿ ಬಸವರಾಜು, ಹೊಸಕೋಟೆಯ ಎಂಟಿಬಿ ನಾಗರಾಜ್, ಯಶವಂತಪುರದ ಎಸ್.ಟಿ ಸೋಮಶೇಖರ್, ಯಲ್ಲಾಪುರದ ಶಿವರಾಮ್ ಹೆಬ್ಬಾರ್ ಅವರು ಮುಂಬೈನಿಂದ ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಯಾರೊಬ್ಬರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲಿಲ್ಲ. ಅನರ್ಹ ಶಾಸಕರು ಬೆಂಗಳೂರಿಗೆ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.