‘ಬೆಂಗಳೂರು- ಮುಂಬೈ ಬ್ರಾಡ್ಗೇಜ್ನ ಮುಖ್ಯ ಮಾರ್ಗಕ್ಕೆ ಶಿರಸಿ– ಹಾವೇರಿ ನಡುವೆ ಸಂಪರ್ಕ ಮಾರ್ಗ ನಿರ್ಮಾಣವಾದರೆ, ವಾಣಿಜ್ಯ ವಹಿವಾಟಿನ ಕೇಂದ್ರವಾಗಿರುವ ಶಿರಸಿಯ ಅಭಿವೃದ್ಧಿಗೆ ಇದು ಪೂರಕವಾಗುತ್ತದೆ. ಈ ಮಾರ್ಗದ ನಡುವೆ ಬರುವ ಹಾವೇರಿ ಜಿಲ್ಲೆಯ ಅಕ್ಕಿಆಲೂರು, ಹಾನಗಲ್, ಶಿವಮೊಗ್ಗ ಜಿಲ್ಲೆಯ ತಿಳುವಳ್ಳಿ, ಜಡೆ ಮೊದಲಾದ ಪ್ರದೇಶಗಳ ಜನರಿಗೆ ರೈಲ್ವೆ ಸಂಪರ್ಕ ಲಭ್ಯವಾಗುತ್ತದೆ’ ಎಂದು ಹಾವೇರಿ– ಶಿರಸಿ ರೈಲ್ವೆ ಹೋರಾಟ ಸಮಿತಿಯು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯೆಲ್ ಅವರಿಗೆ ಪತ್ರ ಬರೆದಿದ್ದಾರೆ.