<p><strong>ಉಡುಪಿ:</strong> ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಎಸ್.ಸುಚೇತಾ ಎಂಬ ವಿದ್ಯಾರ್ಥಿನಿ ಭಾನುವಾರ ಆಂಬುಲೆನ್ಸ್ನಲ್ಲಿ ಪರೀಕ್ಷಾ ಕೇಂದ್ರಕ್ಕೆ ಬಂದು ನೀಟ್ ಪರೀಕ್ಷೆ ಬರೆದರು. ಪರೀಕ್ಷೆ ಮುಗಿಸಿ ಆಂಬುಲೆನ್ಸ್ನಲ್ಲಿಯೇ ಆಸ್ಪತ್ರೆಗೆ ಮರಳಿದರು.</p>.<p>ಸುಚೇತಾ ಕುಂದಾಪುರದ ಎಕ್ಸ್ಲೆಂಟ್ ಕಾಲೇಜು ವಿದ್ಯಾರ್ಥಿನಿ. ಹೊನ್ನಾವರದ ಮಂಕಿಯ ಸುರೇಶ್ ನಾಯಕ್ ಅವರ ಪುತ್ರಿ. ಮೇ 1ರಂದುಬ್ರಹ್ಮಾವರದ ಚೇರ್ಕಾಡಿ ಬಳಿ ಸುಚೇತಾಗೆ ಅಪಘಾತವಾಗಿ, ಕಾಲಿನ ಮೂಳೆ ಮುರಿದಿತ್ತು. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.</p>.<p>ನೀಟ್ ಪರೀಕ್ಷೆ ಬರೆಯಲೇಬೇಕು ಎಂದು ಪಟ್ಟುಹಿಡಿದ ಸುಚೇತಾಗೆ ಆಸ್ಪತ್ರೆಯಿಂದ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಯಿತು. ಮಣಿಪಾಲದಲ್ಲಿರುವ ಮಾಧವ ಕೃಪಾ ಪರೀಕ್ಷಾ ಕೇಂದ್ರದ ಸಿಬ್ಬಂದಿಯೂ ಅನುಕೂಲಕ್ಕೆ ತಕ್ಕಂತೆ ಪರೀಕ್ಷೆ ಬರೆಯಲು ನೆರವು ನೀಡಿದರು.</p>.<p>ಬಳಿಕ ಮಾತನಾಡಿದ ಸುಚೇತಾ, ‘ನೀಟ್ ಪರೀಕ್ಷೆಗೆ ಅಗತ್ಯ ತಯಾರಿ ಮಾಡಿಕೊಂಡಿದ್ದೆ. ದುರದೃಷ್ಟವಶಾತ್ ಅಪಘಾತವಾಯಿತು. ದೇವರ ದಯೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಯಿತು’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>ಸುಚೇತಾ ಜತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅನಘ ಎಂಬ ವಿದ್ಯಾರ್ಥಿನಿಯೂ ಪೋಷಕರ ಜತೆಯಲ್ಲಿ ಬಂದು ಮಾಧವ ಕೃಪ ಶಾಲೆಯಲ್ಲಿ ಪರೀಕ್ಷೆ ಬರೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಎಸ್.ಸುಚೇತಾ ಎಂಬ ವಿದ್ಯಾರ್ಥಿನಿ ಭಾನುವಾರ ಆಂಬುಲೆನ್ಸ್ನಲ್ಲಿ ಪರೀಕ್ಷಾ ಕೇಂದ್ರಕ್ಕೆ ಬಂದು ನೀಟ್ ಪರೀಕ್ಷೆ ಬರೆದರು. ಪರೀಕ್ಷೆ ಮುಗಿಸಿ ಆಂಬುಲೆನ್ಸ್ನಲ್ಲಿಯೇ ಆಸ್ಪತ್ರೆಗೆ ಮರಳಿದರು.</p>.<p>ಸುಚೇತಾ ಕುಂದಾಪುರದ ಎಕ್ಸ್ಲೆಂಟ್ ಕಾಲೇಜು ವಿದ್ಯಾರ್ಥಿನಿ. ಹೊನ್ನಾವರದ ಮಂಕಿಯ ಸುರೇಶ್ ನಾಯಕ್ ಅವರ ಪುತ್ರಿ. ಮೇ 1ರಂದುಬ್ರಹ್ಮಾವರದ ಚೇರ್ಕಾಡಿ ಬಳಿ ಸುಚೇತಾಗೆ ಅಪಘಾತವಾಗಿ, ಕಾಲಿನ ಮೂಳೆ ಮುರಿದಿತ್ತು. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.</p>.<p>ನೀಟ್ ಪರೀಕ್ಷೆ ಬರೆಯಲೇಬೇಕು ಎಂದು ಪಟ್ಟುಹಿಡಿದ ಸುಚೇತಾಗೆ ಆಸ್ಪತ್ರೆಯಿಂದ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಯಿತು. ಮಣಿಪಾಲದಲ್ಲಿರುವ ಮಾಧವ ಕೃಪಾ ಪರೀಕ್ಷಾ ಕೇಂದ್ರದ ಸಿಬ್ಬಂದಿಯೂ ಅನುಕೂಲಕ್ಕೆ ತಕ್ಕಂತೆ ಪರೀಕ್ಷೆ ಬರೆಯಲು ನೆರವು ನೀಡಿದರು.</p>.<p>ಬಳಿಕ ಮಾತನಾಡಿದ ಸುಚೇತಾ, ‘ನೀಟ್ ಪರೀಕ್ಷೆಗೆ ಅಗತ್ಯ ತಯಾರಿ ಮಾಡಿಕೊಂಡಿದ್ದೆ. ದುರದೃಷ್ಟವಶಾತ್ ಅಪಘಾತವಾಯಿತು. ದೇವರ ದಯೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಯಿತು’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>ಸುಚೇತಾ ಜತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅನಘ ಎಂಬ ವಿದ್ಯಾರ್ಥಿನಿಯೂ ಪೋಷಕರ ಜತೆಯಲ್ಲಿ ಬಂದು ಮಾಧವ ಕೃಪ ಶಾಲೆಯಲ್ಲಿ ಪರೀಕ್ಷೆ ಬರೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>