‘ವಿಧಿವಿಜ್ಞಾನ ತಂಡವು ಅಪರಾಧ ನಡೆದ ಸ್ಥಳದ ಚಿತ್ರಣ ಆಧರಿಸಿ, ಸ್ಥಳದಲ್ಲಿರುವ ಸಾಕ್ಷಿಗಳನ್ನು ಪರೀಕ್ಷೆ ಮಾಡುತ್ತದೆ. ಈ ಘಟನೆ ಹೇಗೆ ನಡೆದಿದೆ ಎಂಬುದರ ಮಾಹಿತಿಯನ್ನು ನೀಡುತ್ತದೆ. ಅಪರಾಧವನ್ನು ಹಲವು ಆಯಾಮಗಳಲ್ಲಿ ವೈಜ್ಞಾನಿಕವಾಗಿ ತನಿಖೆ ಮಾಡಲಾಗುತ್ತಿದೆ’ ಎಂದು ಸಿಐಡಿ ಪೊಲೀಸ್ ವರಿಷ್ಠಾಧಿಕಾರಿ ಶರಣಪ್ಪ ಸುದ್ದಿಗಾರರಿಗೆ ತಿಳಿಸಿದರು.