<p><strong>ಬೆಂಗಳೂರು: </strong>ಕೊರೊನಾ ಸೋಂಕು ಹರಡುವಿಕೆ ಹಾಗೂ ನಿಯಂತ್ರಣದ ಉದ್ದೇಶದಿಂದ 'ಕೋವಿಡ್–19’ ಉಸ್ತುವಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಗೆ ವಹಿಸಿ ರಾಜ್ಯಪಾಲ ವಜುಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ.</p>.<p>ಕೊರೊನಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಭಾವಣೆ ಹಾಗೂ ನಿಯಂತ್ರಣದ ಹೊಣೆ ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿ ಇರುವುದು ಸಾಮಾನ್ಯ. ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಇದ್ದ ಜವಾಬ್ದಾರಿಯನ್ನು ಹಿಂಪಡೆದಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈ ಹೊಣೆಯನ್ನುಸುಧಾಕರ್ಗೆ ವಹಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ಇದರನ್ವಯ ರಾಜ್ಯಪಾಲರು ಮಂಗಳವಾರ ಆದೇಶ ಹೊರಡಿಸಿದ್ದಾರೆ.</p>.<p>ಕೊರೊನಾ ಸೋಂಕು ರಾಜ್ಯಕ್ಕೆ ಕಾಲಿಟ್ಟ ಅವಧಿಯಲ್ಲಿ ಶ್ರೀರಾಮುಲು ಅವರು ತಮ್ಮ ಮಗಳ ಮದುವೆ ಕಾರ್ಯಕ್ರಮದಲ್ಲಿ ಸಕ್ರಿಯರಾಗಿದ್ದರು. ಆ ವೇಳೆಯಲ್ಲಿ ಸುಧಾಕರ್ ಅವರೇ ಸೋಂಕು ಹರಡುವಿಕೆ ತಡೆಗೆ ಸಂಬಂಧ ಪಟ್ಟ ಚಟುವಟಿಕೆಗಳ ಮೇಲುಸ್ತುವಾರಿ ವಹಿಸಿದ್ದರು. ಕೊರೊನಾ ಸೋಂಕು ತಡೆ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡುವಾಗಲೂ ಸಿದ್ಧತೆ ಇಲ್ಲದೇ ಬರುತ್ತಿದ್ದ ರಾಮುಲು ತಪ್ಪು ಮಾಹಿತಿ ನೀಡಿ, ಗೊಂದಲ ಮೂಡಿಸಿದ ಪ್ರಕರಣಗಳು ನಡೆದಿದ್ದವು.</p>.<p>ಸೋಮವಾರದಂದು ಕೊರೊನಾ ಸೋಂಕಿತರ ಸಂಖ್ಯೆ 33ಕ್ಕೆ ಏರಿದ್ದರೂ ರಾಮುಲು ಅವರು ಈ ಸಂಖ್ಯೆಯನ್ನು 27 ಎಂದೇ ಪ್ರತಿಪಾದಿಸಿದ್ದರು. ಇದರಿಂದಾಗಿ ವಿಧಾನಸಭೆ ಮತ್ತು ವಿಧಾನನಪರಿಷತ್ತಿನಲ್ಲಿ ಸರ್ಕಾರ ಮುಜುಗರ ಅನುಭವಿಸಬೇಕಾದ ಪರಿಸ್ಥಿತಿ ಎದುರಾಗಿತ್ತು. ಈ ಕಾರಣಕ್ಕಾಗಿಯೇ ರಾಮುಲು ಅವರಿಗೆ ಇದ್ದ ಹೊಣೆಯನ್ನು ಕಿತ್ತುಕೊಂಡು ಪರಿಸ್ಥಿತಿಯನ್ನು ಚೆನ್ನಾಗಿ ನಿಭಾಯಿಸುವುದನ್ನು ಅರಿತಿರುವ ಸುಧಾಕರ್ಗೆ ಜವಾಬ್ದಾರಿ ವಹಿಸಿದ್ದಾರೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೊರೊನಾ ಸೋಂಕು ಹರಡುವಿಕೆ ಹಾಗೂ ನಿಯಂತ್ರಣದ ಉದ್ದೇಶದಿಂದ 'ಕೋವಿಡ್–19’ ಉಸ್ತುವಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಗೆ ವಹಿಸಿ ರಾಜ್ಯಪಾಲ ವಜುಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ.</p>.<p>ಕೊರೊನಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಭಾವಣೆ ಹಾಗೂ ನಿಯಂತ್ರಣದ ಹೊಣೆ ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿ ಇರುವುದು ಸಾಮಾನ್ಯ. ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಇದ್ದ ಜವಾಬ್ದಾರಿಯನ್ನು ಹಿಂಪಡೆದಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈ ಹೊಣೆಯನ್ನುಸುಧಾಕರ್ಗೆ ವಹಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ಇದರನ್ವಯ ರಾಜ್ಯಪಾಲರು ಮಂಗಳವಾರ ಆದೇಶ ಹೊರಡಿಸಿದ್ದಾರೆ.</p>.<p>ಕೊರೊನಾ ಸೋಂಕು ರಾಜ್ಯಕ್ಕೆ ಕಾಲಿಟ್ಟ ಅವಧಿಯಲ್ಲಿ ಶ್ರೀರಾಮುಲು ಅವರು ತಮ್ಮ ಮಗಳ ಮದುವೆ ಕಾರ್ಯಕ್ರಮದಲ್ಲಿ ಸಕ್ರಿಯರಾಗಿದ್ದರು. ಆ ವೇಳೆಯಲ್ಲಿ ಸುಧಾಕರ್ ಅವರೇ ಸೋಂಕು ಹರಡುವಿಕೆ ತಡೆಗೆ ಸಂಬಂಧ ಪಟ್ಟ ಚಟುವಟಿಕೆಗಳ ಮೇಲುಸ್ತುವಾರಿ ವಹಿಸಿದ್ದರು. ಕೊರೊನಾ ಸೋಂಕು ತಡೆ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡುವಾಗಲೂ ಸಿದ್ಧತೆ ಇಲ್ಲದೇ ಬರುತ್ತಿದ್ದ ರಾಮುಲು ತಪ್ಪು ಮಾಹಿತಿ ನೀಡಿ, ಗೊಂದಲ ಮೂಡಿಸಿದ ಪ್ರಕರಣಗಳು ನಡೆದಿದ್ದವು.</p>.<p>ಸೋಮವಾರದಂದು ಕೊರೊನಾ ಸೋಂಕಿತರ ಸಂಖ್ಯೆ 33ಕ್ಕೆ ಏರಿದ್ದರೂ ರಾಮುಲು ಅವರು ಈ ಸಂಖ್ಯೆಯನ್ನು 27 ಎಂದೇ ಪ್ರತಿಪಾದಿಸಿದ್ದರು. ಇದರಿಂದಾಗಿ ವಿಧಾನಸಭೆ ಮತ್ತು ವಿಧಾನನಪರಿಷತ್ತಿನಲ್ಲಿ ಸರ್ಕಾರ ಮುಜುಗರ ಅನುಭವಿಸಬೇಕಾದ ಪರಿಸ್ಥಿತಿ ಎದುರಾಗಿತ್ತು. ಈ ಕಾರಣಕ್ಕಾಗಿಯೇ ರಾಮುಲು ಅವರಿಗೆ ಇದ್ದ ಹೊಣೆಯನ್ನು ಕಿತ್ತುಕೊಂಡು ಪರಿಸ್ಥಿತಿಯನ್ನು ಚೆನ್ನಾಗಿ ನಿಭಾಯಿಸುವುದನ್ನು ಅರಿತಿರುವ ಸುಧಾಕರ್ಗೆ ಜವಾಬ್ದಾರಿ ವಹಿಸಿದ್ದಾರೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>