ಕಬ್ಬು ಬಾಕಿ ಪಾವತಿಗೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಮಾತನಾಡಿದ್ದ ಜಯಶ್ರೀ ಗುರಣ್ಣವರ, ‘ಆಡಳಿತ ನಡೆಸಲು ಕುಮಾರಸ್ವಾಮಿ ನಾಲಾಯಕ್’ ಎಂದು ನಿಂದಿಸಿದ್ದರು. ಅದಕ್ಕೆ ಕೃಷಿಮೇಳದಲ್ಲಿ ಭಾನುವಾರ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ, ‘ನಾಲ್ಕು ವರ್ಷ ಎಲ್ಲಿ ಮಲಗಿದ್ದೆ ತಾಯಿ’ ಎಂದು ಪ್ರಶ್ನಿಸಿದ್ದರು. ಮುಖ್ಯಮಂತ್ರಿಯ ಈ ಹೇಳಿಕೆ ಖಂಡಿಸಿ ರಾಜ್ಯದ ವಿವಿಧೆಡೆ ಸೋಮವಾರ ಪ್ರತಿಭಟನೆ ವ್ಯಕ್ತವಾಗಿತ್ತು.