<p><strong>ಹೂವಿನಹಡಗಲಿ: </strong>ತಾಲ್ಲೂಕಿನ ಹೊಳಗುಂದಿ ಗ್ರಾಮದ ಹೊರ ವಲಯ, ಮೋರಿಗೇರಿ ರಸ್ತೆಯಲ್ಲಿ ಯುವ ಪ್ರೇಮಿಗಳಿಬ್ಬರೂ ಗುರುವಾರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮೃತರನ್ನು ಹಗರಿಬೊಮ್ಮನಹಳ್ಳಿ ತಾಲ್ಲೂಕು ಚಿಲುಗೋಡು ಗ್ರಾಮದ ವಾಲ್ಮೀಕಿ ಜನಾಂಗದ ಗುರುರಾಜ (28), ಸೊನ್ನ ಗ್ರಾಮದ ಒಂಬತ್ತನೇ ತರಗತಿ ವಿದ್ಯಾರ್ಥಿನಿ, ಕುರುಬ ಜನಾಂಗದ ಗಂಗಮ್ಮ (16) ಎಂದು ಗುರುತಿಸಲಾಗಿದೆ.</p>.<p>ಬಾಲಕಿ ಗಂಗಮ್ಮನ ತಾಯಿ ತವರೂರು ಚಿಲುಗೋಡು ಆಗಿದ್ದು, ಆಗಾಗ ಅಜ್ಜಿಯ ಮನೆಗೆ ಹೋಗುತ್ತಿದ್ದ ಗಂಗಮ್ಮ ಅದೇ ಗ್ರಾಮದ ಕಟ್ಟಡ ಕಾರ್ಮಿಕ ಗುರುರಾಜ ನಡುವೆ ಪ್ರೇಮಾಂಕುರವಾಗಿದೆ. ಕಳೆದ ಎರಡು ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ.</p>.<p>ಈ ವಿಷಯ ಎರಡೂ ಕುಟುಂಬದವರಿಗೆ ತಿಳಿದು ಇಬ್ಬರಿಗೂ ಬುದ್ದಿ ಹೇಳಿದ್ದಾರೆ. ಆದರೂ ಇಬ್ಬರು ಪರಸ್ಪರ ಭೇಟಿಯಾಗುವುದನ್ನು ನಿಲ್ಲಿಸಿರಲಿಲ್ಲ ಎನ್ನಲಾಗಿದೆ. ಬಾಲಕಿ ಅಪ್ರಾಪ್ತೆ ಎಂಬ ವಿಷಯವನ್ನು ಮುಖ್ಯವಾಗಿಸಿ, ಕುಟುಂಬದವರು ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಇದರಿಂದ ಮನನೊಂದ ಪ್ರೇಮಿಗಳು ಹೊಳಗುಂದಿ ಗ್ರಾಮದ ಮೋರಿಗೇರಿ ರಸ್ತೆ ಬದಿಯ ಹೊಲವೊಂದರಲ್ಲಿದ್ದ ಬನ್ನಿ ಮರಕ್ಕೆ ಒಂದೇ ಹಗ್ಗಕ್ಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಸ್ಥಳಕ್ಕೆ ಸಿಪಿಐ ಮಾಲತೇಶ ಕೂನಬೇವು, ಪಿಎಸ್ಐ ಎಸ್.ಪಿ,ನಾಯ್ಕ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಹೂವಿನಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ: </strong>ತಾಲ್ಲೂಕಿನ ಹೊಳಗುಂದಿ ಗ್ರಾಮದ ಹೊರ ವಲಯ, ಮೋರಿಗೇರಿ ರಸ್ತೆಯಲ್ಲಿ ಯುವ ಪ್ರೇಮಿಗಳಿಬ್ಬರೂ ಗುರುವಾರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಮೃತರನ್ನು ಹಗರಿಬೊಮ್ಮನಹಳ್ಳಿ ತಾಲ್ಲೂಕು ಚಿಲುಗೋಡು ಗ್ರಾಮದ ವಾಲ್ಮೀಕಿ ಜನಾಂಗದ ಗುರುರಾಜ (28), ಸೊನ್ನ ಗ್ರಾಮದ ಒಂಬತ್ತನೇ ತರಗತಿ ವಿದ್ಯಾರ್ಥಿನಿ, ಕುರುಬ ಜನಾಂಗದ ಗಂಗಮ್ಮ (16) ಎಂದು ಗುರುತಿಸಲಾಗಿದೆ.</p>.<p>ಬಾಲಕಿ ಗಂಗಮ್ಮನ ತಾಯಿ ತವರೂರು ಚಿಲುಗೋಡು ಆಗಿದ್ದು, ಆಗಾಗ ಅಜ್ಜಿಯ ಮನೆಗೆ ಹೋಗುತ್ತಿದ್ದ ಗಂಗಮ್ಮ ಅದೇ ಗ್ರಾಮದ ಕಟ್ಟಡ ಕಾರ್ಮಿಕ ಗುರುರಾಜ ನಡುವೆ ಪ್ರೇಮಾಂಕುರವಾಗಿದೆ. ಕಳೆದ ಎರಡು ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ.</p>.<p>ಈ ವಿಷಯ ಎರಡೂ ಕುಟುಂಬದವರಿಗೆ ತಿಳಿದು ಇಬ್ಬರಿಗೂ ಬುದ್ದಿ ಹೇಳಿದ್ದಾರೆ. ಆದರೂ ಇಬ್ಬರು ಪರಸ್ಪರ ಭೇಟಿಯಾಗುವುದನ್ನು ನಿಲ್ಲಿಸಿರಲಿಲ್ಲ ಎನ್ನಲಾಗಿದೆ. ಬಾಲಕಿ ಅಪ್ರಾಪ್ತೆ ಎಂಬ ವಿಷಯವನ್ನು ಮುಖ್ಯವಾಗಿಸಿ, ಕುಟುಂಬದವರು ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>ಇದರಿಂದ ಮನನೊಂದ ಪ್ರೇಮಿಗಳು ಹೊಳಗುಂದಿ ಗ್ರಾಮದ ಮೋರಿಗೇರಿ ರಸ್ತೆ ಬದಿಯ ಹೊಲವೊಂದರಲ್ಲಿದ್ದ ಬನ್ನಿ ಮರಕ್ಕೆ ಒಂದೇ ಹಗ್ಗಕ್ಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಸ್ಥಳಕ್ಕೆ ಸಿಪಿಐ ಮಾಲತೇಶ ಕೂನಬೇವು, ಪಿಎಸ್ಐ ಎಸ್.ಪಿ,ನಾಯ್ಕ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಹೂವಿನಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>