ನಾಗಮಂಗಲ: ‘ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಕುರಿತು ಮಾರ್ಚ್ 18ರಂದು ತೀರ್ಮಾನ ಪ್ರಕಟಿಸುತ್ತೇನೆ’ ಎಂದು ನಟಿ ಸುಮಲತಾ ಸೋಮವಾರ ತಿಳಿಸಿದರು.
ಕದಬಳ್ಳಿ ಕಾವೇಟಿ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಸ್ಪರ್ಧೆ ಕುರಿತು ಜನಾಭಿಪ್ರಾಯ ಸಂಗ್ರಹಿಸಿದ ನಂತರ ಅವರು ಮಾತನಾಡಿದರು.
‘ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮೊಂದಿಗೆ ಚರ್ಚಿಸಿದ್ದಾರೆ. ಸ್ಪರ್ಧಿಸದಂತೆ ಒತ್ತಡ ಹೇರಿಲ್ಲ. ಬೇರೆ ಕ್ಷೇತ್ರ ದಲ್ಲಿ ಸ್ಪರ್ಧಿಸಲು ಸಲಹೆ ನೀಡಿದ್ದಾರೆ. ಕಡೆ ಗಳಿಗೆಯಲ್ಲಿ ಏನು ಬೇಕಾದರೂ ಆಗಬಹುದು. ಕಾದು ನೋಡುತ್ತೇನೆ’ ಎಂದು ತಿಳಿಸಿದರು.
ನೋಂದಣಿ ಅಭಿಯಾನ: ಚುನಾವಣೆ ಹಿನ್ನೆಲೆಯಲ್ಲಿ ‘ಅಂಬಿ ಅಮರ’ ಹೆಸರಿನಲ್ಲಿ ಆನ್ಲೈನ್ನಲ್ಲಿ ನೋಂದಣಿ ಅಭಿಯಾನಕ್ಕೆ ಸುಮಲತಾ ಪರವಾಗಿ ಚಾಲನೆ ನೀಡಲಾಗಿದೆ.