<p><strong>ನಾಗಮಂಗಲ:</strong> ‘ರಾಜಕೀಯ ಪ್ರವೇಶದ ಬಗ್ಗೆ ಹಿರಿಯರ ಜೊತೆಗೆ ಚರ್ಚಿಸಿ ತೀರ್ಮಾನಿಸುತ್ತೇನೆ. ಯಾವ ಪಕ್ಷದ ಅಭ್ಯರ್ಥಿ ಎಂದು ಈಗಲೇ ಹೇಳಲಾಗುವುದಿಲ್ಲ’ ಎಂದು ನಟಿ ಸುಮಲತಾ ಅಂಬರೀಷ್ ಇಲ್ಲಿ ಭಾನುವಾರ ತಿಳಿಸಿದರು.</p>.<p>ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಹಾಗೂ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಎರಡು ತಿಂಗಳಿಂದ ಇಲ್ಲಿಗೆ ಬರಲು ಸಾಧ್ಯವಾಗಿರಲಿಲ್ಲ. ಸ್ವಾಮೀಜಿ ಜೊತೆಗೆ ಯಾವುದೇ ವಿಚಾರ ಚರ್ಚಿಸಿಲ್ಲ. ಭೇಟಿಗೆ ರಾಜಕೀಯ ಉದ್ದೇಶವೂ ಇಲ್ಲ’ ಎಂದು ಹೇಳಿದರು.</p>.<p>‘ಅಭಿಮಾನಿಗಳು ಅಂಬರೀಷ್ ಅವರನ್ನು ಪ್ರೀತಿ, ವಿಶ್ವಾಸದಿಂದ ಬೆಳೆಸಿದ್ದಾರೆ. ರಾಜಕೀಯ ಪ್ರವೇಶಿಸುವಂತೆ ಜಿಲ್ಲೆಯ ಜನರ ಒತ್ತಾಯವಿದೆ, ಅಂಬರೀಷ್ ಮೇಲಿನ ಪ್ರೀತಿ, ವಿಶ್ವಾಸವೇ ಇದಕ್ಕೆ ಕಾರಣ’ ಎಂದರು.</p>.<p>‘ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಾನು ಬಿಜೆಪಿಯಿಂದ ಸ್ಪರ್ಧಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚಾಲ್ತಿಯಲ್ಲಿರುವ ಸುದ್ದಿ ಸತ್ಯಕ್ಕೆ ದೂರವಾದುದು’ ಎಂದು ನುಡಿದರು.</p>.<p>‘ರಾಜಕೀಯ ಪ್ರವೇಶ ಕುರಿತು ಅಂಬರೀಷ್ ಆಪ್ತರು, ಹಿರಿಯರ ಜೊತೆಗೆ ಚರ್ಚಿಸಿ ನಿರ್ಧರಿಸುತ್ತೇನೆ. ಅಭಿಮಾನಿಗಳ ಒತ್ತಾಯಕ್ಕೆ ಸ್ಪಂದಿಸಬೇಕಿದೆ. ಯಾವುದೇ ನಿರ್ಧಾರವನ್ನು ಸುಲಭವಾಗಿ ತೆಗೆದುಕೊಳ್ಳಲಾಗದು’ ಎಂದರು.</p>.<p>ಅಂಬರೀಷ್ ಪುತ್ರ ಅಭಿಷೇಕ್, ಚಲನಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ನಟ ದೊಡ್ಡಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ:</strong> ‘ರಾಜಕೀಯ ಪ್ರವೇಶದ ಬಗ್ಗೆ ಹಿರಿಯರ ಜೊತೆಗೆ ಚರ್ಚಿಸಿ ತೀರ್ಮಾನಿಸುತ್ತೇನೆ. ಯಾವ ಪಕ್ಷದ ಅಭ್ಯರ್ಥಿ ಎಂದು ಈಗಲೇ ಹೇಳಲಾಗುವುದಿಲ್ಲ’ ಎಂದು ನಟಿ ಸುಮಲತಾ ಅಂಬರೀಷ್ ಇಲ್ಲಿ ಭಾನುವಾರ ತಿಳಿಸಿದರು.</p>.<p>ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಹಾಗೂ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಎರಡು ತಿಂಗಳಿಂದ ಇಲ್ಲಿಗೆ ಬರಲು ಸಾಧ್ಯವಾಗಿರಲಿಲ್ಲ. ಸ್ವಾಮೀಜಿ ಜೊತೆಗೆ ಯಾವುದೇ ವಿಚಾರ ಚರ್ಚಿಸಿಲ್ಲ. ಭೇಟಿಗೆ ರಾಜಕೀಯ ಉದ್ದೇಶವೂ ಇಲ್ಲ’ ಎಂದು ಹೇಳಿದರು.</p>.<p>‘ಅಭಿಮಾನಿಗಳು ಅಂಬರೀಷ್ ಅವರನ್ನು ಪ್ರೀತಿ, ವಿಶ್ವಾಸದಿಂದ ಬೆಳೆಸಿದ್ದಾರೆ. ರಾಜಕೀಯ ಪ್ರವೇಶಿಸುವಂತೆ ಜಿಲ್ಲೆಯ ಜನರ ಒತ್ತಾಯವಿದೆ, ಅಂಬರೀಷ್ ಮೇಲಿನ ಪ್ರೀತಿ, ವಿಶ್ವಾಸವೇ ಇದಕ್ಕೆ ಕಾರಣ’ ಎಂದರು.</p>.<p>‘ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಾನು ಬಿಜೆಪಿಯಿಂದ ಸ್ಪರ್ಧಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚಾಲ್ತಿಯಲ್ಲಿರುವ ಸುದ್ದಿ ಸತ್ಯಕ್ಕೆ ದೂರವಾದುದು’ ಎಂದು ನುಡಿದರು.</p>.<p>‘ರಾಜಕೀಯ ಪ್ರವೇಶ ಕುರಿತು ಅಂಬರೀಷ್ ಆಪ್ತರು, ಹಿರಿಯರ ಜೊತೆಗೆ ಚರ್ಚಿಸಿ ನಿರ್ಧರಿಸುತ್ತೇನೆ. ಅಭಿಮಾನಿಗಳ ಒತ್ತಾಯಕ್ಕೆ ಸ್ಪಂದಿಸಬೇಕಿದೆ. ಯಾವುದೇ ನಿರ್ಧಾರವನ್ನು ಸುಲಭವಾಗಿ ತೆಗೆದುಕೊಳ್ಳಲಾಗದು’ ಎಂದರು.</p>.<p>ಅಂಬರೀಷ್ ಪುತ್ರ ಅಭಿಷೇಕ್, ಚಲನಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ನಟ ದೊಡ್ಡಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>