‘ಅಧಿಕಾರಿಗಳನ್ನು ವೈಯಕ್ತಿಕವಾಗಿ ಅಪಮಾನಗೊಳಿಸುವ ಉದ್ದೇಶದಿಂದ ಯಾವುದೇ ಹೇಳಿಕೆ ನೀಡಿಲ್ಲ. ಆದರೆ ಮೊದಲಿನಿಂದಲೂ ನೀವು ಹಾಗೂ ನಿಮ್ಮ ನಿಬ್ಬಂದಿ ನಡೆದುಕೊಳ್ಳುತ್ತಿರುವ ರೀತಿಯನ್ನು ಗಮನಿಸಿ ವ್ಯಕ್ತವಾಗಿರುವ ಅಭಿಪ್ರಾಯಗಳನ್ನು ತಿಳಿಸಿದ್ದೇನೆ. ಈಗಾಗಲೇ ಈ ಕುರಿತು ನಮ್ಮ ಏಜೆಂಟರು ಲಿಖಿತ ರೂಪದಲ್ಲಿ ದೂರು ನೀಡಿದ್ದಾರೆ. ನಿಖಿಲ್ ಉಮೇದುವಾರಿಕೆ ಸಿಂಧುಗೊಳಿಸುವಾಗ ಸಕಾಲದಲ್ಲಿ ನಮ್ಮ ಏಜೆಂಟರು ಆಕ್ಷೇಪಣೆ ಸಲ್ಲಿಸಿದ್ದಾರೆ. ಆದರೆ, ತಕರಾರಿನ ಕುರಿತು ಯಾವುದೇ ಕ್ರಮ ಕೈಗೊಳ್ಳದೆ, ಪ್ರಕ್ರಿಯೆಯನ್ನು ಸಂಪೂರ್ಣವಾಗಿ ವಿಡಿಯೊ ಮಾಡದೆ ಲೋಪ ಎಸಗಿದ್ದೀರಿ’ ಎಂದು ಉತ್ತರದಲ್ಲಿ ತಿಳಿಸಿದ್ದಾರೆ.