ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲೇಟು ಹೇಳಿಕೆ: ಸುಮಲತಾ ದೂರು

Last Updated 12 ಏಪ್ರಿಲ್ 2019, 20:15 IST
ಅಕ್ಷರ ಗಾತ್ರ

ಮಂಡ್ಯ: ಪಕ್ಷೇತರ ಅಭ್ಯರ್ಥಿ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಗೂಬೆ ಕೂರಿಸುತ್ತಾರೆ ಎಂದು ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲೇ ಸುಮಲತಾ ರಕ್ಷಣೆ ಕೋರಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಈ ಕುರಿತು ಶುಕ್ರವಾರ ಕೆ.ಆರ್.ಪೇಟೆಯಲ್ಲಿ ಮಾಹಿತಿ ನೀಡಿದ ಸುಮ ಲತಾ ‘ಮುಖ್ಯಮಂತ್ರಿಗಳ ಹೇಳಿಕೆಯಿಂದ ನನಗೆ ಆತಂಕ ಉಂಟಾಗಿದೆ. ದಾಳಿಯನ್ನು ಮೊದಲೇ ನಿರೀಕ್ಷಿಸಿ ಅದನ್ನು ನಮ್ಮ ಮೇಲೆ ಹೊರಿಸಲು ತಂತ್ರ ರೂಪಿಸಿದ್ದಾರೆ. ದರ್ಶನ್, ಯಶ್, ಅಭಿಷೇಕ್ ಮೇಲೆ ಕಲ್ಲಿನ ದಾಳಿ ನಡೆಯುವ ಸಾಧ್ಯತೆ ಇದೆ. ಅದಕ್ಕಾಗಿ ರಕ್ಷಣೆ ಕೋರಿ ಆಯೋಗಕ್ಕೆ ದೂರು ನೀಡಿದ್ದೇನೆ’ ಎಂದರು.

‘ಪ್ರಚಾರದ ಕಡೆಯ ಎರಡು ದಿನ ನಮ್ಮ ಬೆಂಬಲಿಗರ ಮೇಲೆ ದಾಳಿ ನಡೆಯ ಬಹುದು. ಮುನ್ನೆಚ್ಚರಿಕೆ ಕ್ರಮವಾಗಿ ರಕ್ಷಣೆ ನೀಡುವಂತೆ ಕೋರಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT