ನನ್ನ ಜನರಿಗಾಗಿ ನನ್ನ ಹೆಜ್ಜೆ ಎಂಬ ಮತ್ತೊಂದು ಪೋಸ್ಟ್ ಹಾಕಿರುವ ಸುಮಲತಾ ಅವರು, ‘ರೈತರ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಮೊದಲು ಬಿಡಬೇಕು. ರೈತರ ಕಷ್ಟಗಳನ್ನು ಪ್ರಾಮಾಣಿಕವಾಗಿ ಅರ್ಥ ಮಾಡಿಕೊಳ್ಳುವ, ಆ ಕಷ್ಟಗಳಿಗೆ ಪರಿಹಾರವನ್ನು ಹುಡುಕುವ ಪ್ರಯತ್ನ ಆಗಬೇಕಾಗಿದೆ. ಬರೀ ಬಾಯಿ ಮಾತಿನಲ್ಲಿ ರೈತರ ಬಗ್ಗೆ ಮಾತನಾಡುತ್ತಾ ಹೋಗುವುದು ಅದು ರೈತರಿಗೆ ಮಾಡುವ ಅನ್ಯಾಯ. ರೈತರಿಗೆ ಭರವಸೆ ಕೊಡುವ ರಾಜಕೀಯ ಮಾಡದೆ ಅವರ ಕಷ್ಟಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವು ರಾಜಕೀಯ ಮಾಡೋಣ’ ಎಂದು ರೈತರ ವಿಷಯವನ್ನು ಉಲ್ಲೇಖಿಸಿದ್ದಾರೆ.