ಸುದ್ದಿಗಾರರೊಂದಿಗೆ ಮಾತನಾಡಿ, ‘ಪಕ್ಷೇತರವಾಗಿ ಸ್ಪರ್ಧಿಸಿದ್ದು, ಮಂಡ್ಯ ಜನರು ಆಯ್ಕೆ ಮಾಡಿದ್ದಾರೆ. ಸದ್ಯಕ್ಕೆ ಬಿಜೆಪಿ ಸೇರುವುದಿಲ್ಲ.ಪಕ್ಷೇತರ ಅಭ್ಯರ್ಥಿ ಯಾವುದೇ ಪಕ್ಷ ಸೇರುವ ಅವಕಾಶ ಕಾನೂನಿನಲ್ಲಿ ಇಲ್ಲ. ಹಾಗಾಗಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಬಹುದಷ್ಟೆ. ಚುನಾವಣೆಯಲ್ಲಿ ಬಿಜೆಪಿ ನನ್ನ ಪರ ನಿಂತಿತ್ತು. ಅವರಿಗೆ ಧನ್ಯವಾದ. ಮಂಡ್ಯ ಜನರ ಅಭಿಪ್ರಾಯ ಪಡೆದು ಬಳಿಕ ಯಾವ ಪಕ್ಷ ಸೇರಬೇಕು ಎಂಬ ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ತಿಳಿಸಿದರು.