ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯದ ಜನ ಇತಿಹಾಸ ಸೃಷ್ಟಿಸಿದ್ದಾರೆ, ಸದ್ಯಕ್ಕೆ ಯಾವುದೇ ಪಕ್ಷ ಸೇರಲ್ಲ: ಸುಮಲತಾ

Last Updated 26 ಮೇ 2019, 19:42 IST
ಅಕ್ಷರ ಗಾತ್ರ

ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಅವರನ್ನು ಸೋಲಿಸಿರುವ ಸುಮಲತಾ ಅಂಬರೀಷ್ ಭಾನುವಾರ ಬಿಜೆಪಿ ಮುಖಂಡರಾದ ಎಸ್.ಎಂ.ಕೃಷ್ಣ, ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದರು. ಗೆಲುವಿಗೆ ಸಹಕಾರ ನೀಡಿದ್ದಕ್ಕೆ ಧನ್ಯವಾದ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಪಕ್ಷೇತರವಾಗಿ ಸ್ಪರ್ಧಿಸಿದ್ದು, ಮಂಡ್ಯ ಜನರು ಆಯ್ಕೆ ಮಾಡಿದ್ದಾರೆ. ಸದ್ಯಕ್ಕೆ ಬಿಜೆಪಿ ಸೇರುವುದಿಲ್ಲ.ಪಕ್ಷೇತರ ಅಭ್ಯರ್ಥಿ ಯಾವುದೇ ಪಕ್ಷ ಸೇರುವ ಅವಕಾಶ ಕಾನೂನಿನಲ್ಲಿ ಇಲ್ಲ. ಹಾಗಾಗಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಬಹುದಷ್ಟೆ. ಚುನಾವಣೆಯಲ್ಲಿ ಬಿಜೆಪಿ ನನ್ನ ಪರ ನಿಂತಿತ್ತು. ಅವರಿಗೆ ಧನ್ಯವಾದ. ಮಂಡ್ಯ ಜನರ ಅಭಿಪ್ರಾಯ ಪಡೆದು ಬಳಿಕ ಯಾವ ಪಕ್ಷ ಸೇರಬೇಕು ಎಂಬ ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ತಿಳಿಸಿದರು.

‘ಸುನಾಮಿ ರೀತಿ ಬಿಜೆಪಿ ಗೆಲುವು ಸಾಧಿಸಿದೆ. ನನ್ನ ಗೆಲುವು ಒಂದು ರೀತಿಯ ಇತಿಹಾಸ. ಮಂಡ್ಯದ ಜನ ಇತಿಹಾಸ ಸೃಷ್ಟಿಸಿದ್ದಾರೆ. ಎಲ್ಲಾ ಪಕ್ಷದವರು ಸಹಕಾರ ನೀಡಿದ್ದಾರೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT