ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾನುವಾರದ ಲಾಕ್‌ಡೌನ್‌: ರಾಜ್ಯದೆಲ್ಲಡೆ ಜನರಿಂದ ಉತ್ತಮ ಪ್ರತಿಕ್ರಿಯೆ

Last Updated 5 ಜುಲೈ 2020, 6:35 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲಾ ಕೇಂದ್ರಗಳು ಭಾನುವಾರದ ಲಾಕ್‌ಡೌನ್‌ಗೆ ಸ್ತಬ್ದಗೊಂಡಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ರಾಜ್ಯದಲ್ಲಿ ಕೊರೊನಾ ವೈರಸ್‌ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಸಂಪೂರ್ಣ ಲಾಕ್‌ಡೌನ್‌ಗೆ ರಾಜ್ಯ ಸರ್ಕಾರ ಆದೇಶಿಸಿತ್ತು.

ಬೆಳಗಾವಿ, ಬೀದರ್, ಕಲಬುರ್ಗಿ, ಚಿಕ್ಕಮಗಳೂರು, ಬಳ್ಳಾರಿ, ಮಂಗಳೂರು, ಹಾವೇರಿಉತ್ತರ ಕನ್ನಡ ಸೇರಿದಂತೆ ಬಹುತೇಕ ಜಿಲ್ಲಾ ಕೇಂದ್ರಗಳಲ್ಲಿ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜನ ಹಾಗೂ ವಾಹನ ಸಂಚಾರದಿಂದ ತುಂಬಿರುತ್ತಿದ್ದ ಪ್ರಮುಖ ರಸ್ತೆಗಳು‌ ಬಿಕೋ ಎನ್ನುತ್ತಿವೆ. ಹಾಲು , ಮೆಡಿಕಲ್ , ಆಸ್ಪತ್ರೆ ಹೊರತುಪಡಿಸಿ ಬಹುತೇಕ ಎಲ್ಲ ಬಂದ್ ಆಗಿದೆ.

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ 21,549ಕ್ಕೆ ಏರಿಕೆಯಾಗಿದೆ. ಇದರಲ್ಲಿ 9,244 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 11,966 ಪ್ರಕರಣಗಳು ಸಕ್ರಿಯವಾಗಿವೆ. ಉಳಿದಂತೆ 335 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT