ಕಿದಿಯೂರು ಹೋಟೆಲ್ನಲ್ಲಿ ಮಂಗಳವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಶ್ಮೀರ ಹಾಗೂ ರಾಮಮಂದಿರ ವಿಚಾರದಲ್ಲಿ ಕೇಂದ್ರದ ನಿಲುವುಗಳು ಸಮಾಧಾನ ತಂದಿಲ್ಲ ಎಂದು ಈಚೆಗೆ ಜಿಲ್ಲಾಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಕಾರಣಕ್ಕೆ ಪಕ್ಷದ ನಿಲುವುಗಳು ಬದಲಾಗುವುದಿಲ್ಲ. ರಾಮಮಂದಿರವನ್ನು ಕಟ್ಟುತ್ತೇವೆ. ಪಾಕ್ ಆಕ್ರಮಿತ ಕಾಶ್ಮೀರವನ್ನೂ ವಶಪಡಿಸಿಕೊಳ್ಳುತ್ತೇವೆ ಎಂದರು.