ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಲಿನ ತಾಪ: ಮಗುವಿಗೆ ಗಾಯ

Last Updated 3 ಏಪ್ರಿಲ್ 2019, 18:07 IST
ಅಕ್ಷರ ಗಾತ್ರ

ಕಾಸರಗೋಡು: ಜಿಲ್ಲೆಯಲ್ಲಿ ಬಿಸಿಲಿನ ತಾಪ ಮುಂದುವರಿದಿದ್ದು, ಪಳ್ಳಿಕೆರೆ ಪೂಚಕ್ಕಾಡಿನಲ್ಲಿ ಮೂರು ವರ್ಷದ ಮಗುವಿಗೆ ಸುಟ್ಟ ಗಾಯಗಳಾಗಿವೆ.

ಪೂಚಕ್ಕಾಡು ಹಮೀದ್ ಎಂಬುವವರ ಮಗ ನಿಜಾವತ್‌ ತಂದೆ ಜತೆಯಲ್ಲಿ ಬೈಕ್‌ನಲ್ಲಿ ಚೆಮ್ನಾಡಿನಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ಬಿಸಿಲಿನಿಂದ ಮೈಕೈ ಸುಟ್ಟ ಗಾಯವಾಯಿತು. ಆತನನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು.

ಕಾಸರಗೋಡು ಸಹಿತ ಕೇರಳದ ಎಂಟು ಜಿಲ್ಲೆಯಲ್ಲಿ ಬುಧವಾರ ಸರಾಸರಿಗಿಂತ ಮೂರು ಡಿಗ್ರಿಯಷ್ಟು ಉಷ್ಣತೆ ಹೆಚ್ಚಾಗಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೂರ್ಯಾಘಾತ ತಟ್ಟದಿರಲು ಜನರು ಹಗಲು 11 ಗಂಟೆಯಿಂದ ಮೂರು ಗಂಟೆಯವರೆಗೆ ಉರಿಬಿಸಿಲಿನಲ್ಲಿ ನಿಲ್ಲಬಾರದು ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT