ವಿಧಾನಸಭೆಗೆ ಆಯ್ಕೆಯಾದ ಬಿ.ಎಸ್. ಯಡಿಯೂರಪ್ಪ, ಬಿ. ಶ್ರೀರಾಮುಲು ಹಾಗೂ ಸಿ.ಎಸ್. ಪುಟ್ಟರಾಜು ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಎರಡು ಕ್ಷೇತ್ರಗಳಲ್ಲಿ ಗೆದ್ದಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಚನ್ನಪಟ್ಟಣ ಉಳಿಸಿಕೊಂಡು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಸಿದ್ದು ನ್ಯಾಮಗೌಡ ನಿಧನದಿಂದ ಜಮಖಂಡಿ ಕ್ಷೇತ್ರ ತೆರವಾಗಿತ್ತು. ಲೋಕಸಭೆಯ ಮೂರು ಕ್ಷೇತ್ರಗಳಿಗೆ ₹36 ಕೋಟಿ ಹಾಗೂ ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ₹3 ಕೋಟಿ ಖರ್ಚಾಗಿದೆ.