‘ಒಂದು ತಿಂಗಳಲ್ಲಿ 1,547 ರೈತರಿಂದ ಕೇವಲ 6,927 ಕ್ವಿಂಟಲ್ ಹೆಸರುಕಾಳು ಖರೀದಿ ಮಾಡಲಾಗಿದೆ. ಇನ್ನುಳಿದ ಆರು ದಿನಗಳಲ್ಲಿ 1.13 ಲಕ್ಷ ರೈತರಿಂದ 2.26 ಲಕ್ಷ ಕ್ವಿಂಟಲ್ ಹೆಸರುಕಾಳು ಖರೀದಿ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಹೆಸರುಕಾಳು ಉತ್ಪನ್ನವನ್ನು ಬೆಂಬಲಬೆಲೆಗೆ ನೀಡಲು ನೋಂದಣಿ ಮಾಡಿಸಿದ್ದಾರೆ. ಆದರೆ, ಈ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಿಲ್ಲ’ ಎಂದು ಟೀಕಿಸಿದ್ದಾರೆ.