ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪೌರತ್ವ ತಿದ್ದುಪಡಿ ವಿರುದ್ಧದ ಹೋರಾಟ ಹಿಂಸಾತ್ಮಕ ರೂಪ ಪಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಗೂ ಅಕ್ರಮ ವಲಸಿಗರು ರೈಲ್ವೆ ಆಸ್ತಿ ನಾಶ ಪಡಿಸಲು ಮುಂದಾಗಿದ್ದಾರೆ. ಅವರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ನಿಯಂತ್ರಣಕ್ಕೆ ಬಾರದಿದ್ದರೆ, ಕಂಡಲ್ಲಿ ಗುಂಡಿಕ್ಕಬೇಕು’ ಎಂದರು.