ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ತಿ ಹಾನಿ ಮಾಡಿದರೆ ಕಂಡಲ್ಲಿ ಗುಂಡಿಕ್ಕಲು ಸಲಹೆ ನೀಡುತ್ತೇನೆ: ಸುರೇಶ್‌ ಅಂಗಡಿ

Last Updated 18 ಡಿಸೆಂಬರ್ 2019, 1:59 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ರೈಲ್ವೆ ಆಸ್ತಿ ಹಾನಿ ಮಾಡುವವರ ನಿಯಂತ್ರಣಕ್ಕೆ ಅನಿವಾರ್ಯವಾದಲ್ಲಿ ‘ಕಂಡಲ್ಲಿ ಗುಂಡಿಕ್ಕಿ’ ಎಂದು ರಾಜ್ಯ ಸರ್ಕಾರಗಳಿಗೆ ಸಲಹೆ ಮಾಡುತ್ತೇನೆ’ ಎಂದು ರೈಲ್ವೆ ಸಚಿವ ಸುರೇಶ ಅಂಗಡಿ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪೌರತ್ವ ತಿದ್ದುಪಡಿ ವಿರುದ್ಧದ ಹೋರಾಟ ಹಿಂಸಾತ್ಮಕ ರೂಪ ಪಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಗೂ ಅಕ್ರಮ ವಲಸಿಗರು ರೈಲ್ವೆ ಆಸ್ತಿ ನಾಶ ಪಡಿಸಲು ಮುಂದಾಗಿದ್ದಾರೆ. ಅವರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ನಿಯಂತ್ರಣಕ್ಕೆ ಬಾರದಿದ್ದರೆ, ಕಂಡಲ್ಲಿ ಗುಂಡಿಕ್ಕಬೇಕು’ ಎಂದರು.

‘ಪೌರತ್ವ ತಿದ್ದುಪಡಿಯಿಂದ ದೇಶದ ಪ್ರಜೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಆದರೂ, ಪ್ರತಿಪಕ್ಷಗಳು ಜನರನ್ನು ತಪ್ಪು ದಾರಿಗೆ ಎಳೆಯುವ ಮೂಲಕ ಸರ್ಕಾರದ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿವೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT