ಉದ್ಯಮಿಯೊಬ್ಬರು,ಅರಣ್ಯ ಇಲಾಖೆಯಿಂದಲೇ ಅನುಮತಿ ಪಡೆದು ನೂರಕ್ಕೂ ಹೆಚ್ಚು ಮರ ಕಡಿಸಿದ್ದರು. ನೇರಳೆ, ಹಲಸು, ಬೈನೆ ಮರಗಳನ್ನು ಕಡಿದು ಉರುಳಿಸಲಾಗಿತ್ತು. ಜೂನ್ 6ರಂದು ಪ್ರಕರಣ ಬೆಳಕಿಗೆ ಬಂದ ನಂತರ ಸ್ಥಳಕ್ಕೆ ಮಾಜಿ ಸಚಿವ ಎಂ.ಸಿ. ನಾಣಯ್ಯ ನೇತೃತ್ವದಲ್ಲಿ ತೆರಳಿದ್ದ ಪರಿಸರ ಪ್ರೇಮಿಗಳು ಮರ ಕಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಗೃಹ ನಿರ್ಮಾಣ ಮಂಡಳಿಯ ಹೆಸರಿನಲ್ಲಿ ಜಮೀನು ಖರೀದಿಸಿ ರೆಸಾರ್ಟ್ ನಿರ್ಮಾಣ ಮಾಡಲಾಗುತ್ತಿದೆ ಎಂದೂ ಆರೋಪಿಸಿದ್ದರು.