‘ನಮ್ಮ ಕಾರ್ಯಕರ್ತರು ಮುಖ್ಯಮಂತ್ರಿ ಅವರಿಗೆ ಅವಮಾನ ಮಾಡಿಲ್ಲ.ಕುಮಾರಸ್ವಾಮಿ ನೀಡಿದ್ದ ಅನುದಾನ ಹಿಂತೆಗೆದುಕೊಂಡಿದ್ದಕ್ಕೆ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದರು. ಆದರೆ ಪ್ರಕರಣದ ನೆಪ ಒಡ್ಡಿ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ. ಬಾಯಿಗೆ ರಿವಾಲ್ವರ್ ಇಟ್ಟು ಎನ್ಕೌಂಟರ್ ಮಾಡುವುದಾಗಿ ಬೆದರಿಸಿದ್ದಾರೆ. ನನ್ನ 50 ವರ್ಷಗಳ ಸಾರ್ವಜನಿಕ ಬದುಕಿನಲ್ಲಿ ಇಂತಹ ದಬ್ಬಾಳಿಕೆಯನ್ನು ನೋಡಿಲ್ಲ’ ಎಂದು ಅವರು ಶುಕ್ರವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.