ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯಾದಗಿರಿ ಪಿಎಸ್‌ಐ ಅಮಾನತುಗೊಳಿಸಿ’

ಮುಖ್ಯಮಂತ್ರಿಗೆ ದೇವೇಗೌಡರಿಂದ ಪತ್ರ
Last Updated 25 ಅಕ್ಟೋಬರ್ 2019, 18:07 IST
ಅಕ್ಷರ ಗಾತ್ರ

ಬೆಂಗಳೂರು:ಯಾದಗಿರಿಯಲ್ಲಿ ಜೆಡಿಎಸ್ ಯುವ ಕಾರ್ಯಕರ್ತರ ಮೇಲೆ ಪೊಲೀಸ್ ದರ್ಪ ತೋರಿದ ಯಾದಗಿರಿ ಪಟ್ಟಣದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಅವರನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ‍ಪಕ್ಷದ ವರಿಷ್ಠ ಎಚ್‌. ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

‘ನಮ್ಮ ಕಾರ್ಯಕರ್ತರು ಮುಖ್ಯಮಂತ್ರಿ ಅವರಿಗೆ ಅವಮಾನ ಮಾಡಿಲ್ಲ.ಕುಮಾರಸ್ವಾಮಿ ನೀಡಿದ್ದ ಅನುದಾನ ಹಿಂತೆಗೆದುಕೊಂಡಿದ್ದಕ್ಕೆ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದರು. ಆದರೆ ಪ್ರಕರಣದ ನೆಪ ಒಡ್ಡಿ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ. ಬಾಯಿಗೆ ರಿವಾಲ್ವರ್ ಇಟ್ಟು ಎನ್‌ಕೌಂಟರ್‌ ಮಾಡುವುದಾಗಿ ಬೆದರಿಸಿದ್ದಾರೆ. ನನ್ನ 50 ವರ್ಷಗಳ ಸಾರ್ವಜನಿಕ ಬದುಕಿನಲ್ಲಿ ಇಂತಹ ದಬ್ಬಾಳಿಕೆಯನ್ನು ನೋಡಿಲ್ಲ’ ಎಂದು ಅವರು ಶುಕ್ರವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT