ರಾಮಕೃಷ್ಣರು ಹಾಗೂ ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಂದೇಶಗಳಿಂದ ಸ್ಫೂರ್ತಿ ಪಡೆದಿದ್ದ ಜಗದಾತ್ಮನಂದಜೀ ಅವರು ಬೆಂಗಳೂರಿನ ಶಾಖೆ ರಾಮಕೃಷ್ಣ ಸಂಘ ಸೇರಿದ್ದರು. ನಂತರ ಮಂಗಳೂರು, ಮೈಸೂರು, ಷಿಲ್ಲಾಂಗ್, ಸಿಂಗಪೂರ್ ಮತ್ತು ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮಗಳಲ್ಲಿ ಸೇವೆ ಸಲ್ಲಿಸಿದ್ದರು. ವೇದಾಂತ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿ ಪಾಂಡಿತ್ಯ ಪಡೆದಿದ್ದರು. ಸಾಹಿತ್ಯ ಸೇವೆಗೆ ಆರ್ಯ ಪ್ರಶಸ್ತಿಯ ಗೌರವ ಲಭಿಸಿದೆ.