‘ಮಠದ ಬೈಲಾ ಪ್ರಕಾರ, ಪೀಠಾಧಿಕಾರಿಗಳು, ಹುಬ್ಬಳ್ಳಿ– ಧಾರವಾಡ ಭಕ್ತರು ಹಾಗೂ ಮಠದ ಆಡಳಿತ ಮಂಡಳಿಯವರು ಸೇರಿ ಉತ್ತರಾಧಿಕಾರಿ ನೇಮಿಸಬೇಕು. ಈ ನಿರ್ಣಯವನ್ನು ನೋಂದಣಿ ಮಾಡಿಸಬೇಕು. ಆಗ ಮಾತ್ರ ನಿರ್ಣಯ ಊರ್ಜಿತವಾಗುತ್ತದೆ. ನನ್ನ ವಿಷಯದಲ್ಲಿ ಇವೆಲ್ಲ ಪ್ರಕ್ರಿಯೆಗಳೂ ಮುಗಿದಿವೆ. ಇದರ ಆಧಾರದ ಮೇಲೆ ಹೇಳುವುದಾದರೆ ಎಳ್ಳಷ್ಟೂ ಸಂಶಯಕ್ಕೆ ಎಡೆ ಇಲ್ಲದಂತೆ ನನಗೆ ಉತ್ತರಾಧಿಕಾರಿ ಸ್ಥಾನ ಸಿಗಬೇಕು. ಈ ನಿಟ್ಟಿನಲ್ಲಿ ನ್ಯಾಯಾಲಯದಲ್ಲಿಯೂ ದಾವೆ ಹೂಡಿದ್ದೇನೆ. ವಿಚಾರಣೆ ಹಂತದಲ್ಲಿದೆ’ ಎಂದರು.