‘ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗೆ ಮಕ್ಕಳನ್ನು ಸೇರಿಸಬೇಕು ಎಂಬ ಆಸೆ ಇತ್ತು. ಮಾತೃಭಾಷೆ ಕನ್ನಡದಲ್ಲಿ ಕಲಿಯುವುದರಿಂದ ವಿಷಯಗಳನ್ನು ಆಳವಾಗಿ ಮತ್ತು ಸ್ಪಷ್ಟವಾಗಿ ಅರಿಯಲು ಸಾಧ್ಯ. ಭಾವನೆಗಳ ಅಭಿವ್ಯಕ್ತಿಗೂ ತೊಡಕಾಗುವುದಿಲ್ಲ. ಕನ್ನಡವನ್ನು ಐಚ್ಛಿಕ ಭಾಷೆಯಾಗಿ ಅಧ್ಯಯನ ಮಾಡಿ, ಕೆಎಎಸ್ ಪರೀಕ್ಷೆಯಲ್ಲಿ ನಾಲ್ಕು ಬಾರಿಯೂ ಅತಿ ಹೆಚ್ಚು ಅಂಕಗಳನ್ನು ಪಡೆದು ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ’ ಎನ್ನುತ್ತಾರೆ ಹುಲ್ಲುಮನಿ ತಿಮ್ಮಣ್ಣ.