<figcaption>""</figcaption>.<p><strong>ಗುಬ್ಬಿ:</strong> ತಾಲ್ಲೂಕಿನ ತಿಪ್ಪೂರು ಗ್ರಾಮದ ಸಿದ್ದಮ್ಮ ಅವರಿಗೆ ಸೇರಿದ 170 ಅಡಿಕೆ ಮರ ಮತ್ತು 25 ತೆಂಗಿನ ಮರಗಳನ್ನು ತಾಲ್ಲೂಕು ಆಡಳಿತ ಕಡಿದು ಹಾಕಿದೆ ಎಂಬ ವಿಡಿಯೊ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.</p>.<p>ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಮಹಿಳಾ ದಿನಾಚರಣೆಯ ದಿನವೇ ಮಹಿಳೆಯ ಮೇಲೆ ತಹಶೀಲ್ದಾರ್ ಮತ್ತು ಕಂದಾಯ ನಿರೀಕ್ಷಕ, ಗ್ರಾಮ ಲೆಕ್ಕಿಗರು ದೌರ್ಜನ್ಯ ಎಸಗಿದ್ದಾರೆ ಎಂದು ಜನರು ಆರೋಪಿಸುತ್ತಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ಎಂ.ಮಮತಾ, ‘ನಾವು ಯಾವುದೇ ರೈತರ ಜಮೀನಲ್ಲಿರುವ ಅಡಿಕೆ ಮತ್ತು ತೆಂಗಿನ ಮರಗಳನ್ನು ಕಡಿದಿಲ್ಲ. ಮುಜರಾಯಿ ಇಲಾಖೆ ಸೇರಿದ ಉಡುಸಲಮ್ಮ ದೇವಸ್ಥಾನದಲ್ಲಿ ಮಾ.12 ರಂದು ಜಾತ್ರಾ ಮಹೋತ್ಸವ ಇದೆ. ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರಿಂದ ಜಿಲ್ಲಾಧಿಕಾರಿ ಅವರು ಈ ಆವರಣ ತೆರವುಗೊಳಿಸಿ ಜಾತ್ರೆ ನಡೆಯಲು ಅವಕಾಶ ಮಾಡಿಕೊಡಿ ಎಂಬ ಸೂಚಿಸಿದ್ದರು. ಆ ಮೇರೆಗೆ ದೇವಸ್ಥಾನಕ್ಕೆ ಸೇರಿರುವ ಜಾಗದಲ್ಲಿದ್ದ ಮರಗಳನ್ನು ಮಾತ್ರ ತೆರವುಗೊಳಿಸಲಾಗಿದೆ’ ಎಂದು ತಿಳಿಸಿದರು. ತೆರವಿಗೂ ಮುನ್ನ ಮರ ಬೆಳೆಸಿದ್ದ ದೇವಾಲಯದ 4 ಮಂದಿ ಅರ್ಚಕರಿಂದ ಒಪ್ಪಿಗೆ ಪತ್ರಕ್ಕೆ ಸಹಿ ಪಡೆಯಲಾಗಿದೆ. ಈ ವೇಳೆಯಲ್ಲಿ ಯಾವ ಮಹಿಳೆಯು ಸಹ ಬಂದು ಕೇಳಿರಲಿಲ್ಲ. ಇದು ನಡೆದಿರುವುದು ಮಾ.6 ರಂದು. ಆದರೆ ಮಹಿಳಾ ದಿನಾಚರಣೆಯ ದಿನ ವಿಡಿಯೊ ಚಿತ್ರೀಕರಣ ಮಾಡಿ ತಪ್ಪು ಸಂದೇಶ ಹರಡುತ್ತಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಗುಬ್ಬಿ:</strong> ತಾಲ್ಲೂಕಿನ ತಿಪ್ಪೂರು ಗ್ರಾಮದ ಸಿದ್ದಮ್ಮ ಅವರಿಗೆ ಸೇರಿದ 170 ಅಡಿಕೆ ಮರ ಮತ್ತು 25 ತೆಂಗಿನ ಮರಗಳನ್ನು ತಾಲ್ಲೂಕು ಆಡಳಿತ ಕಡಿದು ಹಾಕಿದೆ ಎಂಬ ವಿಡಿಯೊ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.</p>.<p>ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಮಹಿಳಾ ದಿನಾಚರಣೆಯ ದಿನವೇ ಮಹಿಳೆಯ ಮೇಲೆ ತಹಶೀಲ್ದಾರ್ ಮತ್ತು ಕಂದಾಯ ನಿರೀಕ್ಷಕ, ಗ್ರಾಮ ಲೆಕ್ಕಿಗರು ದೌರ್ಜನ್ಯ ಎಸಗಿದ್ದಾರೆ ಎಂದು ಜನರು ಆರೋಪಿಸುತ್ತಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ಎಂ.ಮಮತಾ, ‘ನಾವು ಯಾವುದೇ ರೈತರ ಜಮೀನಲ್ಲಿರುವ ಅಡಿಕೆ ಮತ್ತು ತೆಂಗಿನ ಮರಗಳನ್ನು ಕಡಿದಿಲ್ಲ. ಮುಜರಾಯಿ ಇಲಾಖೆ ಸೇರಿದ ಉಡುಸಲಮ್ಮ ದೇವಸ್ಥಾನದಲ್ಲಿ ಮಾ.12 ರಂದು ಜಾತ್ರಾ ಮಹೋತ್ಸವ ಇದೆ. ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರಿಂದ ಜಿಲ್ಲಾಧಿಕಾರಿ ಅವರು ಈ ಆವರಣ ತೆರವುಗೊಳಿಸಿ ಜಾತ್ರೆ ನಡೆಯಲು ಅವಕಾಶ ಮಾಡಿಕೊಡಿ ಎಂಬ ಸೂಚಿಸಿದ್ದರು. ಆ ಮೇರೆಗೆ ದೇವಸ್ಥಾನಕ್ಕೆ ಸೇರಿರುವ ಜಾಗದಲ್ಲಿದ್ದ ಮರಗಳನ್ನು ಮಾತ್ರ ತೆರವುಗೊಳಿಸಲಾಗಿದೆ’ ಎಂದು ತಿಳಿಸಿದರು. ತೆರವಿಗೂ ಮುನ್ನ ಮರ ಬೆಳೆಸಿದ್ದ ದೇವಾಲಯದ 4 ಮಂದಿ ಅರ್ಚಕರಿಂದ ಒಪ್ಪಿಗೆ ಪತ್ರಕ್ಕೆ ಸಹಿ ಪಡೆಯಲಾಗಿದೆ. ಈ ವೇಳೆಯಲ್ಲಿ ಯಾವ ಮಹಿಳೆಯು ಸಹ ಬಂದು ಕೇಳಿರಲಿಲ್ಲ. ಇದು ನಡೆದಿರುವುದು ಮಾ.6 ರಂದು. ಆದರೆ ಮಹಿಳಾ ದಿನಾಚರಣೆಯ ದಿನ ವಿಡಿಯೊ ಚಿತ್ರೀಕರಣ ಮಾಡಿ ತಪ್ಪು ಸಂದೇಶ ಹರಡುತ್ತಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>