ಈ ಬಗ್ಗೆ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ಎಂ.ಮಮತಾ, ‘ನಾವು ಯಾವುದೇ ರೈತರ ಜಮೀನಲ್ಲಿರುವ ಅಡಿಕೆ ಮತ್ತು ತೆಂಗಿನ ಮರಗಳನ್ನು ಕಡಿದಿಲ್ಲ. ಮುಜರಾಯಿ ಇಲಾಖೆ ಸೇರಿದ ಉಡುಸಲಮ್ಮ ದೇವಸ್ಥಾನದಲ್ಲಿ ಮಾ.12 ರಂದು ಜಾತ್ರಾ ಮಹೋತ್ಸವ ಇದೆ. ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರಿಂದ ಜಿಲ್ಲಾಧಿಕಾರಿ ಅವರು ಈ ಆವರಣ ತೆರವುಗೊಳಿಸಿ ಜಾತ್ರೆ ನಡೆಯಲು ಅವಕಾಶ ಮಾಡಿಕೊಡಿ ಎಂಬ ಸೂಚಿಸಿದ್ದರು. ಆ ಮೇರೆಗೆ ದೇವಸ್ಥಾನಕ್ಕೆ ಸೇರಿರುವ ಜಾಗದಲ್ಲಿದ್ದ ಮರಗಳನ್ನು ಮಾತ್ರ ತೆರವುಗೊಳಿಸಲಾಗಿದೆ’ ಎಂದು ತಿಳಿಸಿದರು. ತೆರವಿಗೂ ಮುನ್ನ ಮರ ಬೆಳೆಸಿದ್ದ ದೇವಾಲಯದ 4 ಮಂದಿ ಅರ್ಚಕರಿಂದ ಒಪ್ಪಿಗೆ ಪತ್ರಕ್ಕೆ ಸಹಿ ಪಡೆಯಲಾಗಿದೆ. ಈ ವೇಳೆಯಲ್ಲಿ ಯಾವ ಮಹಿಳೆಯು ಸಹ ಬಂದು ಕೇಳಿರಲಿಲ್ಲ. ಇದು ನಡೆದಿರುವುದು ಮಾ.6 ರಂದು. ಆದರೆ ಮಹಿಳಾ ದಿನಾಚರಣೆಯ ದಿನ ವಿಡಿಯೊ ಚಿತ್ರೀಕರಣ ಮಾಡಿ ತಪ್ಪು ಸಂದೇಶ ಹರಡುತ್ತಿದ್ದಾರೆ ಎಂದರು.