ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಹಶೀಲ್ದಾರ್ ಕೊಲೆ ಆರೋಪಿ ವಿರುದ್ಧ ಗೂಂಡಾ ಕಾಯ್ದೆಯನ್ವಯ ಪ್ರಕರಣ: ಸಚಿವ ಆರ್‌.ಅಶೋಕ

Last Updated 10 ಜುಲೈ 2020, 19:01 IST
ಅಕ್ಷರ ಗಾತ್ರ

ಬೆಂಗಳೂರು: ತಹಶೀಲ್ದಾರ್‌ ಚಂದ್ರಮೌಳೇಶ್ವರ ಅವರನ್ನು ಕೊಲೆ ಮಾಡಿದ ಆರೋಪಿ ವಿರುದ್ಧ ಗೂಂಡಾ ಕಾಯ್ದೆಯನ್ವಯ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ.

ಮುಂದೆಂದೂ ಇಂತಹ ಘಟನೆ ಸಂಭವಿಸದಂತೆ ಎಚ್ಚರವಹಿಸುವ ಅಗತ್ಯವಿದೆ. ಅದಕ್ಕಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಅವರು ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು.

‘ಈ ವಿಚಾರವಾಗಿ ಜಿಲ್ಲಾಧಿಕಾರಿ ಜತೆ ದೂರವಾಣಿ ಮೂಲಕ ಮಾತನಾಡಿದ್ದೇನೆ’ ಎಂದು ತಿಳಿಸಿದರು.

ಮುಖ್ಯಮಂತ್ರಿಯವರ ಘೋಷಣೆ ಪ್ರಕಾರ, ಮೃತರ ಕುಟುಂಬಕ್ಕೆ ತಕ್ಷಣವೇ ₹25 ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT