ಭಾಗಮಂಡಲದಿಂದ ತಲಕಾವೇರಿಗೆ ಅಥವಾ ತಲಕಾವೇರಿಯಿಂದ ಭಾಗಮಂಡಲಕ್ಕೆ ತೆರಳುವ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿ ಬಸ್ ವ್ಯವಸ್ಥೆ ಇಲ್ಲದೇ ನಿತ್ಯ ಪರದಾಡುತ್ತಿದ್ದಾರೆ. ಕಳೆದ ಮಳೆಗಾಲದಲ್ಲಿ ಸಂಚಾರ ಅಸ್ತವ್ಯಸ್ಥಗೊಂಡ ಕಾರಣದಿಂದ ಸ್ಥಗಿತಗೊಂಡಿದ್ದ ಬಸ್ ಸಂಚಾರ, ಇಲ್ಲಿಯವರೆಗೆ ಆರಂಭಗೊಂಡಿಲ್ಲ. ಖಾಸಗಿ ಬಸ್ ಮಾಲೀಕರು ನಷ್ಟದ ಕಾರಣ ನೀಡುತ್ತಾರೆ ಎಂದು ಆರೋಪಿಸಿದ್ದಾರೆ.