‘ಸುಧಾಕರ್ ಡಾಕ್ಟರ್, ಆದರೆ ನಾನು ಲಾಯರ್. ಸುಪ್ರೀಂಕೋರ್ಟ್ ತೀರ್ಪನ್ನು ಓದಿಕೊಂಡಿದ್ದೇನೆ. ಚುನಾವಣೆಗೆ ನಿಂತು ಪವಿತ್ರರಾಗಿ ಬನ್ನಿ ಎಂದು ಹೇಳಿದೆಯೇ ಹೊರತು ಸೋಲು, ಗೆಲುವಿನ ಬಗ್ಗೆ ಹೇಳಿಲ್ಲ. ಸೋತ ಲಕ್ಷ್ಮಣ ಸವದಿ ಅವರನ್ನು ಉಪಮುಖ್ಯಮಂತ್ರಿ ಮಾಡಲಾಗಿದೆ. ಇನ್ನು ನಾವು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿದೆ’ ಎಂದು ವಿಶ್ವನಾಥ್ ಪ್ರಶ್ನಿಸಿದರು.