<p><strong>ಬೆಂಗಳೂರು: </strong>ಪಶುಸಂಗೋಪನಾ ಇಲಾಖೆಯಲ್ಲಿ ವೈದ್ಯರ ಕೊರತೆ ತೀವ್ರವಾಗಿದ್ದು, ಅವರಿಗೆ ಪಶು ಚಿಕಿತ್ಸೆಯ ಜವಾಬ್ದಾರಿ ನೀಡುವ ಬದಲು ಸಂಬಂಧವೇ ಇಲ್ಲದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ<br />ಹುದ್ದೆಗಳಿಗೆ ನಿಯೋಜನೆ ಮಾಡಿರುವುದು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.</p>.<p>ಗ್ರಾಮೀಣಾಭಿವೃದ್ಧಿ ಇಲಾಖೆಗೆ ಪತ್ರ ಬರೆದಿರುವ ಕೆಲ ಶಾಸಕರು, ತಾ.ಪಂ.ಗೆ ನಿಯೋಜಿಸಿರುವ ಪಶುವೈದ್ಯರು ಅಧಿಕಾರ ವಹಿಸಿಕೊಳ್ಳಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ.</p>.<p>ಪಶುಸಂಗೋಪನೆ ಇಲಾಖೆಯು ಇತ್ತೀಚೆಗೆ 8 ಮಂದಿ ಪಶುವೈದ್ಯರನ್ನುತಾ.ಪಂ ಕಾರ್ಯನಿರ್ವಹಕ ಅಧಿಕಾರಿಗಳ ಹುದ್ದೆಗಳಿಗೆ ನಿಯೋಜಿಸಿಆದೇಶಿಸಿತ್ತು. ಈ ಆದೇಶಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಹ ಒಪ್ಪಿಗೆನೀಡಿರುವುದು ವಿವಾದಕ್ಕೆ ಕಾರಣವಾಗಿದೆ.</p>.<p>ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಹುದ್ದೆ ಆಡಳಿತಾತ್ಮಕ ಸ್ವರೂಪದ್ದಾಗಿದ್ದು, ಇಲ್ಲಿಗೆ ಸಾಕಷ್ಟು ಅನುದಾನ ಹರಿದು ಬರುತ್ತದೆ. ಈ ಹಿನ್ನೆಲೆಯಲ್ಲೇ ನಿಯೋಜನೆಗೆ ಒತ್ತಡಗಳು ಸಾಮಾನ್ಯ. ಈಗಲೂ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪರ್ಕಿಸದೆ ನಿಯೋಜಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.</p>.<p>ಪಶುವೈದ್ಯರ ನಿಯೋಜನೆಯನ್ನು ಆರ್ಡಿಪಿಆರ್ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಖ್ ಸಹ ಒಪ್ಪಿಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪಶುಸಂಗೋಪನಾ ಇಲಾಖೆಯಲ್ಲಿ ವೈದ್ಯರ ಕೊರತೆ ತೀವ್ರವಾಗಿದ್ದು, ಅವರಿಗೆ ಪಶು ಚಿಕಿತ್ಸೆಯ ಜವಾಬ್ದಾರಿ ನೀಡುವ ಬದಲು ಸಂಬಂಧವೇ ಇಲ್ಲದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ<br />ಹುದ್ದೆಗಳಿಗೆ ನಿಯೋಜನೆ ಮಾಡಿರುವುದು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.</p>.<p>ಗ್ರಾಮೀಣಾಭಿವೃದ್ಧಿ ಇಲಾಖೆಗೆ ಪತ್ರ ಬರೆದಿರುವ ಕೆಲ ಶಾಸಕರು, ತಾ.ಪಂ.ಗೆ ನಿಯೋಜಿಸಿರುವ ಪಶುವೈದ್ಯರು ಅಧಿಕಾರ ವಹಿಸಿಕೊಳ್ಳಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ.</p>.<p>ಪಶುಸಂಗೋಪನೆ ಇಲಾಖೆಯು ಇತ್ತೀಚೆಗೆ 8 ಮಂದಿ ಪಶುವೈದ್ಯರನ್ನುತಾ.ಪಂ ಕಾರ್ಯನಿರ್ವಹಕ ಅಧಿಕಾರಿಗಳ ಹುದ್ದೆಗಳಿಗೆ ನಿಯೋಜಿಸಿಆದೇಶಿಸಿತ್ತು. ಈ ಆದೇಶಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಹ ಒಪ್ಪಿಗೆನೀಡಿರುವುದು ವಿವಾದಕ್ಕೆ ಕಾರಣವಾಗಿದೆ.</p>.<p>ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಹುದ್ದೆ ಆಡಳಿತಾತ್ಮಕ ಸ್ವರೂಪದ್ದಾಗಿದ್ದು, ಇಲ್ಲಿಗೆ ಸಾಕಷ್ಟು ಅನುದಾನ ಹರಿದು ಬರುತ್ತದೆ. ಈ ಹಿನ್ನೆಲೆಯಲ್ಲೇ ನಿಯೋಜನೆಗೆ ಒತ್ತಡಗಳು ಸಾಮಾನ್ಯ. ಈಗಲೂ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪರ್ಕಿಸದೆ ನಿಯೋಜಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.</p>.<p>ಪಶುವೈದ್ಯರ ನಿಯೋಜನೆಯನ್ನು ಆರ್ಡಿಪಿಆರ್ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಖ್ ಸಹ ಒಪ್ಪಿಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>