ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಹುದ್ದೆ ಆಡಳಿತಾತ್ಮಕ ಸ್ವರೂಪದ್ದಾಗಿದ್ದು, ಇಲ್ಲಿಗೆ ಸಾಕಷ್ಟು ಅನುದಾನ ಹರಿದು ಬರುತ್ತದೆ. ಈ ಹಿನ್ನೆಲೆಯಲ್ಲೇ ನಿಯೋಜನೆಗೆ ಒತ್ತಡಗಳು ಸಾಮಾನ್ಯ. ಈಗಲೂ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪರ್ಕಿಸದೆ ನಿಯೋಜಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.